ವಿದ್ಯಾರ್ಥಿಗಳ ಹೊಡೆದಾಟದಲ್ಲಿ ಒಬ್ಬ ಸಾವು: ಶಿಕ್ಷಕ ಅಮಾನತು

Webdunia
ಸೋಮವಾರ, 2 ಮೇ 2022 (16:54 IST)
ಬ್ಯಾಂಡ್ ಧರಿಸಿದ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು ಓರ್ವ ವಿದ್ಯಾರ್ಥಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ತಮಿಳುನಾಡಿನ ತಿರುನಲ್ವೇಲಿ ಅಂಬಸಮುದ್ರಂನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದು ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
17 ವರ್ಷದ ಬಾಲಕ ಮೂವರು ವಿದ್ಯಾರ್ಥಿಗಳು ಕೈಗೆ ಬ್ಯಾಂಡ್ ಧರಿಸಿದ್ದನ್ನು ಪ್ರಶ್ನಿಸಿದ್ದಾನೆ ಇದು ಒಂದು ನಿರ್ದಿಷ್ಟ ಜಾತಿಯ ಗುರುತಾಗಿರುವುದರಿಂದ ತೆಗೆಯುವಂತೆ ಹೇಳಿದ್ದಾನೆ ಇದಕ್ಕೊಪ್ಪದ ಮೂವರು ವಿದ್ಯಾರ್ಥಿಗಳು ಜಗಳಕ್ಕಿಳಿದಿದ್ದಾರೆ.
ನಂತರ ಮೂವರು ವಿದ್ಯಾರ್ಥಿಗಳು ಸೇರಿ ಓರ್ವ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಕಾರಣ ವಿದ್ಯಾರ್ಥಿ ತೀವ್ರ ಅಸ್ವಸ್ಥನಾಗಿದ್ದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಸಾವನಪ್ಪಿದ ವಿದ್ಯಾರ್ಥಿಯು ಹಿಂದುಳಿದ ಜನಾಂಗಕ್ಕೆ ಸೇರಿದವನಾಗಿದ್ದು ಇನ್ನು ಮೂವರು ವಿದ್ಯಾರ್ಥಿಗಳು ಅನ್ಯ ಧರ್ಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಇಟ್ಟಿಗೆಯಿಂದ ಹಲ್ಲೆ ನಡೆಸಿದ ಕಾರಣ ವಿದ್ಯಾರ್ಥಿಯ ತಲೆ ಹಾಗು ಎಡ ಕಿವಿ ಭಾಗಕ್ಕೆ ತೀವ್ರ ಪೆಟ್ಟಾಗಿದ್ದ ಕಾರಣ ಬದುಕುಳಿಯಲಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತ್ತು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಹಾಗು ಗ್ರಾಮಸ್ಥರು ರಸ್ತೆ ತಡೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments