Webdunia - Bharat's app for daily news and videos

Install App

ಮಾತು ಕೇಳದೇ ಜೀನ್ಸ್ ಧರಿಸಿದ ಯುವತಿ ಕೊಂದ ಅಜ್ಜ, ಚಿಕ್ಕಪ್ಪಂದಿರು!

Webdunia
ಗುರುವಾರ, 22 ಜುಲೈ 2021 (20:06 IST)
ತಮ್ಮ ಮಾತನ್ನು ಧಿಕ್ಕರಿಸಿ ಜೀನ್ಸ್ ಧರಿಸುತ್ತಿದ್ದ ಯುವತಿಯನ್ನು ಅಜ್ಜ ಹಾಗೂ ಚಿಕ್ಕಪ್ಪಂದಿರು ಹೊಡೆದು ಕೊಂದ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಸಾವ್ರೆಜಿ ಖಾರ್ಗ್ ಗ್ರಾಮದ 17 ವರ್ಷದ ಯುವತಿಯನ್ನು ಕೊಂದಿದ್ದೂ ಅಲ್ಲದೇ ಶವವನ್ನು ಶವವನ್ನು ಕಶ್ಯ-ಪಾಟ್ನಾ ಹೆದ್ದಾರಿಯಲ್ಲಿರುವ ಪತನ್ವಾ ಸೇತುವೆಯಿಂದ ಎಸೆದಿದ್ದು, ಅದು ಸೇತುವೆಯ ಗ್ರಿಲ್ ಗೆ ಸಿಕ್ಕಿಹಾಕಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸೋಮವಾರ ಜೀನ್ಸ್ ಮತ್ತು ಟಾಪ್ ಧರಿಸದಂತೆ ಒತ್ತಾಯಿಸಿದ್ದರು. ಆದರೆ ಈ ಮಾತುಗಳನ್ನು ಧಿಕ್ಕರಿಸಿದ್ದರಿಂದ ಅಜ್ಜ, ಚಿಕ್ಕಪ್ಪಂದಿರು ಸೇರಿಕೊಂಡು ತೀವ್ರವಾಗಿ ಥಳಿಸಿದ್ದಾರೆ. ಥಳಿತದಿಂದಾಗಿ ಯುವತಿ ಮೃತಪಟ್ಟಿದ್ದಾಳೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
ತಾಯಿ ನೀಡಿದ ದೂರಿನ ಪ್ರಕಾರ, ಬಾಲಕಿ ತಲೆಯನ್ನು ಗೋಡೆಗೆ ಗುದ್ದಿದ್ದರಿಂದ ಆಕೆಗೆ ಗಂಭೀರವಾದ ಗಾಯವಾಗಿದ್ದು ಆಕೆಯ ಸಾವಿಗೆ ಕಾರಣವಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ತಲೆಗೆ ತೀವ್ರವಾದ ಗಾಯ ಮತ್ತು ಮುರಿತ ಕೂಡ ಖಚಿತವಾಗಿದೆ ಎಂದು ಸರ್ಕಲ್ ಅಧಿಕಾರಿ ಯಶ್ ತ್ರಿಪಾಠಿ ತಿಳಿಸಿದ್ದಾರೆ.
ಮೃತ ಬಾಲಕಿಯ ತಾಯಿ, ಅಜ್ಜಿ ಸೇರಿದಂತೆ 10 ಜನರ ವಿರುದ್ಧ ದೂರು ನೀಡಿದ್ದಾರೆ. ಸೆಕ್ಷನ್ 201(ಅಪರಾಧ ಸಾಕ್ಷಿ ನಾಶ ಯತ್ನ), 302(ಕೊಲೆ) ಮತ್ತು ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಹಾವಾಡಿ ಎಸ್‌ಎಚ್‌ಒ ರಾಮ್ ಮೋಹನ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments