Webdunia - Bharat's app for daily news and videos

Install App

ಲವರ್ ಭೇಟಿಯಾಗಿದ್ದಕ್ಕೆ ತಂಗಿಯನ್ನು ಕೊಂದ ಅಣ್ಣ

Webdunia
ಶನಿವಾರ, 3 ಅಕ್ಟೋಬರ್ 2015 (16:23 IST)
ತನ್ನ ತಂಗಿಯ ಪ್ರೇಮ ಸಂಬಂಧದಿಂದ ಕೆರಳಿದ್ದ ಸಹೋದರನೊಬ್ಬ ಆಕೆಯನ್ನು ಅಮಾನುಷವಾಗಿ ಕೊಲೆಗೈದ ಪ್ರಕರಣ ಮೀರತ್‌ನಲ್ಲಿ ನಡೆದಿದೆ. ಇದೊಂದು ಮರ್ಯಾದಾ ಹತ್ಯೆ ಎಂದು ಪೊಲೀಸರು ಶಂಕಿಸಿದ್ದು ಆರೋಪಿ ಸಹೋದರ ಈಗ ಪೊಲೀಸರ ವಶದಲ್ಲಿದ್ದಾನೆ.

ಕೊಲೆಗೈದ ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಆರೋಪಿ ತಾನು ಮಾಡಿದ ಕೃತ್ಯಕ್ಕೆ ಯಾವುದೇ ಪಶ್ಚಾತಾಪವಿಲ್ಲ ಎಂದಿದ್ದಾನೆ. 
 
ತಂಗಿ ಉಸ್ಮಾ ಪ್ರೇಮಿಯ ಜತೆಯಲ್ಲಿ ಪರಾರಿಯಾಗುತ್ತಾಳೆ ಎಂಬ ಭಯದಿಂದ ನಮ್ಮ ಕುಟುಂಬ ಸರ್ಧಾನಾ ಗ್ರಾಮದಿಂದ ಸನುತಾ ಗ್ರಾಮಕ್ಕೆ ಸ್ಥಳಾಂತರಗೊಂಡಿತ್ತು. ಆದರೂ ಪ್ರೇಮಿಗಳಿಬ್ಬರು ಭೇಟಿಯಾಗುವುದನ್ನು ನಿಲ್ಲಿಸಿರಲಿಲ್ಲ. ಆತನನ್ನು ತೊರೆದು ಬಿಡುವಂತೆ ಎಷ್ಟು ಹೇಳಿದರೂ ಆಕೆ ಕೇಳುತ್ತಿರಲಿಲ್ಲ ಎಂದು ಆರೋಪಿ ಅನ್ಸ್ ಪೊಲೀಸರ ಬಳಿ ಹೇಳಿದ್ದಾನೆ. 
 
ಇದರಿಂದ ಕೋಪಗೊಂಡ ಆತ ಆಕೆ ಮಲಗಿದ್ದಾಗ ಕುತ್ತಿಗೆಯನ್ನು ಸೀಳಿ ಕೊಲೆಗೈದು ಪರಾರಿಯಾಗಿದ್ದಾನೆ ಮತ್ತು ಅದೇ ಸಂಜೆ ಮರಳಿ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಮೃತಳ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments