Webdunia - Bharat's app for daily news and videos

Install App

ಹಿಮಾಚಲ್: ಬಸ್ ಕಣಿವೆಗೆ ಬಿದ್ದು 18 ಮಂದಿ ಪ್ರಯಾಣಿಕರ ಸಾವು

Webdunia
ಮಂಗಳವಾರ, 1 ಸೆಪ್ಟಂಬರ್ 2015 (19:43 IST)
ರಾಜಧಾನಿಯಿಂದ 185 ಕಿ.ಮೀ ದೂರದಲ್ಲಿರುವ ಹಿಂದುಸ್ತಾನ್ ಟಿಬೆಟ್ ನ್ಯಾಷನಲ್ ಹೈವೇಯ ನಾಥಾಪಾ ಕಣಿವೆಯ 200 ಮೀಟರ್ ಆಳಕ್ಕೆ ಬಸ್ ಬಿದ್ದ ಪರಿಣಾಮವಾಗಿ 18 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು 12 ಮಂದಿ ಗಾಯಗೊಂಡ ದಾರುಣ ಘಟನೆ ವರದಿಯಾಗಿದೆ. 
 
ಬಸ್ ಅಪಘಾತವಾದ ಸಂದರ್ಭದಲ್ಲಿ ಸ್ಥಳದಲ್ಲಿಯೇ 15 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಗಾಯಗಳಿಂದ ಬಳಲುತ್ತಿದ್ದ ಮೂವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಾಗಿ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ನಾಥ್ ತಿಳಿಸಿದ್ದಾರೆ. 
 
ನಾಲ್ಕು ಮಂದಿ ಗಾಯಾಳುಗಳ ಸ್ಥಿತಿ ತೀವ್ರ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಖಾಸಗಿ ಸಂಸ್ಥೆಯ ಸಾರಿಗೆ ಬಸ್ ರಾಂಪುರ್‌ನಿಂದ ರೆಕೋಂಗ್ ಪಿಯೋ ಪಟ್ಟಣಕ್ಕೆ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ. ಉಳಿದವರು ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಬಸ್‌ನಲ್ಲಿ ಬಹುತೇಕರು ಸ್ಥಳೀಯರಾಗಿದ್ದರಿಂದ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನತೆ ಘಟನಾ ಸ್ಥಳಕ್ಕೆ ಆಗಮಿಸಿ ತಮ್ಮ ತಮ್ಮ ಸಂಬಂಧಿಕರನ್ನು ಹುಡುಕುತ್ತಿರುವ ದೃಶ್ಯ ಕರಳು ಕಿತ್ತುವಂತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments