Webdunia - Bharat's app for daily news and videos

Install App

19ರ ಯುವತಿ ಮೇಲೆ 23 ಮಂದಿಯಿಂದ ಗ್ಯಾಂಗ್‌ ರೇಪ್‌: 12 ಆರೋಪಿಗಳು ಅರೆಸ್ಟ್‌

Sampriya
ಶುಕ್ರವಾರ, 11 ಏಪ್ರಿಲ್ 2025 (18:59 IST)
ವಾರಾಣಾಸಿ: 19ರ ಯುವತಿ ಮೇಲೆ ಆರು ದಿನಗಳ ಅವಧಿಯಲ್ಲಿ 23 ಮಂದಿ ಯುವಕರು ಅತ್ಯಾಚಾರ ಎಸಗಿರುವ ಪ್ರಕರಣ ಇದೀಗ ಪೊಲೀಸರು 12ಜನರನ್ನು ಬಂಧಿಸಿದ್ದಾರೆ. ವಾರಾಣಾಸಿಯಲ್ಲಿ ನಡೆದ ಈ ಸಾಮೂಹಿಕ ಅತ್ಯಾಚಾರ ಪ್ರಕರಣವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಿ ಆರೋಪಿಗಳ ವಿರುದ್ಧ 'ಕಠಿಣ ಕ್ರಮ' ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ದೂರಿನ ಪ್ರಕಾರ, ಮಾರ್ಚ್ 29 ಮತ್ತು ಏಪ್ರಿಲ್ 4 ರ ನಡುವೆ ಹಲವಾರು ಸ್ಥಳಗಳಲ್ಲಿ 23 ಪುರುಷರು 19ವರ್ಷದ ಯುವತಿ ಮೇಲೆ ನಿರಂತರ ರೇಪ್ ಮಾಡಿದ್ದಾರೆ. ಈ ಸಂಬಂಧ ಸಂತ್ರಸ್ತೆಯ ಮನೆಯವರು ದೂರು ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 70(1)(ಸಾಮೂಹಿಕ ಅತ್ಯಾಚಾರ), 74 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 123 (ಅಪರಾಧ ಮಾಡುವ ಉದ್ದೇಶದಿಂದ ವಿಷದ ಮೂಲಕ ಗಾಯಗೊಳಿಸುವುದು ಇತ್ಯಾದಿ), 126(2) (ತಪ್ಪು ಸಂಯಮ), 127(2) (ತಪ್ಪು ಬಂಧನ) ಮತ್ತು 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು.

ಈ ಪ್ರಕರಣದಲ್ಲಿ 23 ಆರೋಪಿಗಳಲ್ಲಿ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ವ್ಯಕ್ತಿಗಳನ್ನು ರಾಜ್ ವಿಶ್ವಕರ್ಮ, ಸಮೀರ್, ಆಯುಷ್, ಸೊಹೈಲ್, ದಾನಿಶ್, ಅನ್ಮೋಲ್, ಸಾಜಿದ್, ಜಹೀರ್, ಇಮ್ರಾನ್, ಜೈಬ್, ಅಮನ್ ಮತ್ತು ರಾಜ್ ಖಾನ್ ಎಂದು ಗುರುತಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments