ದೆಹಲಿ: 1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಇಬ್ಬರು ಸಿಖ್ಖರ ಹತ್ಯೆಯಲ್ಲಿನ ಪಾತ್ರಕ್ಕಾಗಿ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ದೆಹಲಿ ಕಂಟೋನ್ಮೆಂಟ್ ಗಲಭೆ ಪ್ರಕರಣದಲ್ಲಿ ಭಾಗಿಯಾಗಿ ಈಗಾಗಲೇ ಶಿಕ್ಷೆ ಅನುಭವಿಸುತ್ತಿರುವ ಕುಮಾರ್ಗೆ ಇದು ಎರಡನೇ ಜೀವಾವಧಿ ಶಿಕ್ಷೆಯಾಗಿದೆ.
ಜೀವಾವಧಿ ಶಿಕ್ಷೆಯ ಹೊರತಾಗಿ, ಕುಮಾರ್ಗೆ ಗಲಭೆಗಾಗಿ ಸೆಕ್ಷನ್ 147 ರ ಅಡಿಯಲ್ಲಿ ಎರಡು ವರ್ಷ, ಮಾರಕ ಆಯುಧಗಳಿಂದ ಗಲಭೆ ಎಸಗಿದಕ್ಕಾಗಿ ಮೂರು ವರ್ಷ ಮತ್ತು ಸೆಕ್ಷನ್ 148 ರ ಅಡಿಯಲ್ಲಿ ದಂಡ ಮತ್ತು ಸೆಕ್ಷನ್ 308 ರ ಅಡಿಯಲ್ಲಿ ಮರಣ ಅಥವಾ ಗಂಭೀರ ಹಾನಿ ಉಂಟುಮಾಡುವ ಉದ್ದೇಶದಿಂದ ಅಪರಾಧಿ ನರಹತ್ಯೆಗೆ ಪ್ರಯತ್ನಿಸಿದ್ದಕ್ಕಾಗಿ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.
ನವೆಂಬರ್ 1, 1984 ರಂದು ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣ್ದೀಪ್ ಸಿಂಗ್ ಅವರನ್ನು ಕೊಲ್ಲಲು ಜನಸಮೂಹವನ್ನು ಮುನ್ನಡೆಸಿದ ಮತ್ತು ಪ್ರಚೋದನೆ ನೀಡಿದ ಆರೋಪ ಕುಮಾರ್ ಮೇಲಿತ್ತು.
ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯ ಈಗಾಗಲೇ ಸಜ್ಜನ್ ಕುಮಾರ್ ಅಪರಾಧಿ ಎಂದು ತೀರ್ಪು ನೀಡಿತ್ತು. 1984ರಲ್ಲಿ ಸಿಖ್ ವಿರೋಧಿ ದಂಗೆ ವೇಳೆ ಇಬ್ಬರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.
ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದಿದ್ದ ಘಟನೆಯಲ್ಲಿ 1984ರ ನವೆಂಬರ್ 1ರಂದು ತಂದೆ, ಮಗನ ಕೊಲೆ ಆಗಿತ್ತು. ತಂದೆ ಜಸ್ವಂತ್ ಸಿಂಗ್, ಮಗ ತರುಣ್ದೀಪ್ ಸಿಂಗ್ ಕೊಲೆ ನಡೆದಿತ್ತು. ಸಜ್ಜನ್ ಕುಮಾರ್ ನೇತೃತ್ವದ ಗುಂಪಿನ ವಿರುದ್ಧ ಕೇಸ್ ದಾಖಲಾಗಿತ್ತು. ಪಂಜಾಬಿ ಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.