Webdunia - Bharat's app for daily news and videos

Install App

2ಜಿ ರೂವಾರಿ ಪಿ.ಚಿದಂಬರಂ ತಿಹಾರ್ ಜೈಲಿನ ಅತಿಥಿ: ಬಿಜೆಪಿ

Webdunia
ಶುಕ್ರವಾರ, 30 ಸೆಪ್ಟಂಬರ್ 2011 (15:42 IST)
PTI
2 ಜಿ ಹಗರಣದಲ್ಲಿ ಕೇಂದ್ರ ಗೃಹ ಸಚಿವರ ಪಾತ್ರವಿರುವುದರ ಬಗ್ಗೆ ಹೇರಳ ಸಾಕ್ಷ್ಯಾಧಾರಗಳು ಲಭ್ಯವಿದ್ದು, ಅವರನ್ನು ತಿಹಾರ್ ಜೈಲಿಗೆ ಕಳುಹಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಕಾರಿಣಿ ಸಭೆಯಲ್ಲಿ ಪಕ್ಷದ ವಕ್ತಾರ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ವಕ್ತಾರ ಪ್ರಸಾದ್, ಯುಪಿಎ ಸರಕಾರ ಚಿದಂಬರಂ ಅವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದರು.

2 ಜಿ ಹಗರಣದಲ್ಲಿ ಚಿದಂಬರಂ ಅವ್ಯವಹಾರಗಳ ಬಗ್ಗೆ ಹಲವು ಸಾಕ್ಷ್ಯಾಧಾರಗಳು ಲಭ್ಯವಿವೆ. ಅವರನ್ನು ತಿಹಾರ್ ಜೈಲಿಗೆ ಕಳುಹಿಸುವುದನ್ನು ಬಿಟ್ಟು ಯುಪಿಎ ಸರಕಾರ ಅವರನ್ನು ರಕ್ಷಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಜಿ ಟೆಲಿಕಾಂ ಸಚಿವ ಎ.ರಾಜಾ ವಿರುದ್ಧ ಸಾಕ್ಷ್ಯಾಧಾರಗಳಿರುವುದರಿಂದ ಇದೀಗ ಜೈಲಿನಲ್ಲಿದ್ದಾರೆ. ಚಿದಂಬರಂ ಕೂಡಾ ರಾಜಾ ಎಸಗಿದಷ್ಟೆ ಗಂಭೀರ ಕರ್ತವ್ಯಲೋಪ ಎಸಗಿದ್ದಾರೆ. ಆದ್ದರಿಂದ ರಾಜಾ ಯಾಕೆ ಜೈಲಿನಲ್ಲಿದ್ದಾರೆ ಮತ್ತು ಚಿದಂಬರಂ ಯಾಕೆ ಹೊರಗಿದ್ದಾರೆ. ಅವರನ್ನು ಕೂಡಾ ತಿಹಾರ್ ಜೈಲಿಗೆ ಕಳುಹಿಸಬೇಕು ಎಂದು ಕಿಡಿಕಾರಿದರು.

ಕೇಂದ್ರದ ಗೃಹ ಸಚಿವರ ವಿರುದ್ಧ ತನಿಖೆ ನಡೆಸದಂತೆ ಕೇಂದ್ರ ಸರಕಾರ ಸಿಬಿಐಗೆ ಆದೇಶಿಸಿದೆ ಎಂದು ಬಿಜೆಪಿ ಮುಖಂಡ ಪ್ರಸಾದ್ ಆರೋಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments