ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮೌಲ್ವಿಗಳು ಭಾರತಕ್ಕೆ ವಾಪಸ್

Webdunia
ಸೋಮವಾರ, 20 ಮಾರ್ಚ್ 2017 (14:02 IST)
ದೆಹಲಿಯ ಹಜರರತ್ ನಿಜಾಮುದ್ದೀನ್ ದರ್ಗಾದ ಮುಖ್ಯಸ್ಥ ಸೇರಿದಂತೆ ಪಾಕಿಸ್ತಾನಕ್ಕೆ ತೆರಳಿ ನಾಪತ್ತೆಯಾಗಿದ್ದ ಇಬ್ಬರು ಮೌಲ್ವಿಗಳು ಭಾರತಕ್ಕೆ ವಾಪಸ್ ಆಗಿದ್ದಾರೆ. ಏರ್`ಪೋರ್ಟ್`ನಲ್ಲಿ ಬಂದಿಳಿದ ಮೌಲ್ವಿಗಳನ್ನ ಕುಟುಂಬ ಸದಸ್ಯರು ಸೇರಿ ಹಲವರು ಬರಮಾಡಿಕೊಂಡರು.


ಹಜರತ್ ನಿಜಾಮುದ್ದೀನ್ ದರ್ಗಾ ಮುಖ್ಯಸ್ಥ ಸೈಯದ್ ಆಸಿಫ್ ನಿಜಾಮಿ ಮತ್ತು ಅವರ ಸೋದರಳಿಯ ನಜೀಮ್ ಅಲಿ ನಿಜಾಮಿ ಮಾರ್ಚ್ 8ರಂದು ಲಾಹೋರ್`ಗೆ ತೆರಳಿದ್ದರು. 80 ವರ್ಷದ ಆಸೀಫ್ ತನ್ನ ಸಹೋದರಿಯನ್ನ ನೋಡಲು ಅಲ್ಲಿಂದ ಕರಾಚಿಗೆ ತೆರಳಿದ್ದರು. ಬಳಿಕ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿತ್ತು.

ಬಳಿಕ ಪಾಕಿಸ್ತಾನ ಸರ್ಕಾರವನ್ನ ಸಂಪರ್ಕಿಸಿದ್ದ ಭಾರತ ಮೌಲ್ವಿಗಳನ್ನ ಪತ್ತೆಮಾಡಿತ್ತು. ಮೌಲ್ವಿಗಳು ಸಿಂಧ್ ಪ್ರಾಂತ್ಯದ ಪ್ರದೇಶವೊಂದಕ್ಕೆ ತೆರಳಿದ್ದರಿಂದ ಸಂಪರ್ಕ ಸಾಧ್ಯವಾಗಿರಲಿಲ್ಲ ಎಂದು ತಿಳಿದುಬಂದಿದೆ.

ತಂದೆ ವಾಪಸ್ಸಾದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಆಸೀಫ್ ಪುತ್ರ ಅಸೀಮ್ ನಿಜಾಮಿ, ಭಾರತ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲೇ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಏರ್ಪಡಿಸಲಾಗಿದೆ. ಪಾಕಿಸ್ತಾನದಿಂದ ವಾಪಸ್ಸಾದ ಇಬ್ಬರೂ ಮೌಲ್ವಿಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ತನಿಖಾ ಸಂಸ್ಥೆಗಳ ಅಧಿಕಾರಿಗಳನ್ನ ಸಹ ಭೇಟಿಮಾಡುವ ಸಾಧ್ಯತೆ ಇದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments