Webdunia - Bharat's app for daily news and videos

Install App

ಟ್ಯೂಷನ್‌ಗೆ ಹೊರಟವರು ಮಸಣ ಸೇರಿದರು

Webdunia
ಶುಕ್ರವಾರ, 17 ಜೂನ್ 2016 (08:30 IST)
ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ಬಸ್ ನಿಲ್ದಾಣದ ಬಳಿ ಬೆಂಗಳೂರು- ಮೈಸೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.  
 
ಮೃತರನ್ನು ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದ ನಿವಾಸಿಗಳಾದ ವಿವೇಕ್ (17) ಮತ್ತು ಸುಷ್ಮಿತಾ (16) ಎಂದು ಗುರುತಿಸಲಾಗಿದೆ. ಇವರಿಬ್ಬರು ರಾಮನಗರದ ಶಾಂತಿನಿಕೇತನ ಪಿಯು ಕಾಲೇಜು ವಿದ್ಯಾರ್ಥಿಗಳಾಗಿದ್ದು ಟ್ಯೂಷನ್‌ಗೆ ತೆರಳುತ್ತಿದ್ದರು. 
 
ಆ ಸಂದರ್ಭದಲ್ಲಿ ವೇಗವಾಗಿ ಬಂದ ತಮಿಳುನಾಡು ಮೂಲದ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ವಿವೇಕ್ ಸ್ಥಳದಲ್ಲೇ ಮೃತಪಟ್ಟರೆ, ಸುಷ್ಮಿತಾ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. 
 
ಚನ್ನಪಟ್ಟಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments