Webdunia - Bharat's app for daily news and videos

Install App

20 ಆಪ್ ಶಾಸಕರು ಅನರ್ಹ: ರಾಷ್ಟ್ರಪತಿ ಕೋವಿಂದ್ ಅಂಕಿತ

Webdunia
ಭಾನುವಾರ, 21 ಜನವರಿ 2018 (16:11 IST)
ಲಾಭದಾಯಕ ಹುದ್ದೆಹೊಂದಿದ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೋವಿಂದ್ 20 ಆಮ್ ಆದ್ಮಿ ಪಕ್ಷದ ಶಾಸಕರನ್ನು ಅನರ್ಹಗೊಳಿಸಿ ಅಂಕಿತ ಹಾಕಿದ್ದಾರೆ.
ಆಮ್ ಆದ್ಮಿ ಪಕ್ಷದ 20 ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂದು ಕೇಂದ್ರ ಚುನಾವಣೆ ಆಯೋಗ ರಾಷ್ಟ್ರಪತಿಯವರಿಗೆ ಶಿಫಾರಸ್ಸು ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಇದೀಗ ಕೋವಿಂದ್ ಅಂಕಿತ ಹಾಕುವುದರೊಂದಿಗೆ 20 ಶಾಸಕರನ್ನು ಶಾಸಕತ್ವ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ.
 
ಕೇಂದ್ರ ಚುನಾವಣೆ ಆಯೋಗದ ಕ್ರಮವನ್ನು ಪ್ರಶ್ನಿಸಿ ಆಪ್ ಪಕ್ಷ ಹೈಕೋರ್ಟ್ ಮೆಟ್ಟಿಲೇರಿತ್ತು. ರಾಷ್ಟ್ರಪತಿ ಕೋವಿಂದ್ ಅವರನ್ನು ಭೇಟಿ ಮಾಡಿ ವಿವರಣೆ ನೀಡಲು ಸಮಯಾವಕಾಶ ಕೋರಿತ್ತು. ಆದರೆ, ತರಾತುರಿಯಲ್ಲಿ ರಾಷ್ಟ್ರಪತಿ ಕೋವಿಂದ್ ಅಂಕಿತ ಹಾಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
 
ಕೇಂದ್ರ ಚುನಾವಣೆ ಆಯೋಗ ಲಾಭದಾಯಕ ಹುದ್ದೆ ಹೊಂದಿದ ಶಾಸಕರ ಅಹವಾಲು ಕೇಳದೆ ಏಕಾಏಕೀ ನಿರ್ಧಾರ ತೆಗೆದುಕೊಂಡು ರಾಷ್ಟ್ರಪತಿಯವರಿಗೆ ಶಿಫಾರಸ್ಸು ಮಾಡಿರುವುದು, ರಾಷ್ಟ್ರಪತಿಗಳು ತರಾತುರಿಯಲ್ಲಿ ಅಂಕಿತ ಹಾಕಿರುವ ಹಿಂದೆ ಪ್ರಧಾನಿ ಮೋದಿಯ ಕೈವಾಡವಿದೆ ಎಂದು ಆಪ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮಾತನಾಡಿ, ಜನತಾ ನ್ಯಾಯಾಲಯದಲ್ಲಿ ನಮಗೆ ನ್ಯಾಯ ದೊರೆಯುವುದು ಖಚಿತ ವಿಪಕ್ಷಗಳಿಗೆ ಠೇವಣಿ ಕೂಡಾ ದಕ್ಕುವುದಿಲ್ಲ ಎಂದು ಅಬ್ಬರಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Video: ಪೊಲೀಸರ ಮೇಲೆಯೇ ದಾಳಿ ಮಾಡಿದ ದುಷ್ಕರ್ಮಿಗಳಿಗೆ ಯುಪಿ ಪೊಲೀಸರು ಪಾಠ ಕಲಿಸಿದ್ದು ಹೀಗೆ

ಹೊಳೆ ಬದಿ ಸ್ನಾನ ಮಾಡುವಾಗ ಬಂತೊಂದು ದೊಡ್ಡ ಸರ್ಪ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments