Webdunia - Bharat's app for daily news and videos

Install App

ಪಂಚರಾಜ್ಯ ಚುನಾವಣೆ: ಪಂಜಾಬ್‌ನಲ್ಲಿಂದು ಮೋದಿ, ರಾಹುಲ್, ಕೇಜ್ರಿ ರ‍್ಯಾಲಿ

Webdunia
ಶುಕ್ರವಾರ, 27 ಜನವರಿ 2017 (10:55 IST)
ಪಂಜಾಬ್ ಚುನಾವಣೆಗೆ ಕೇವಲ 1 ವಾರ ಬಾಕಿ ಉಳಿದಿದ್ದು ನಾಲ್ಕು ದೊಡ್ಡ ಪಕ್ಷಗಳು ಮತದಾರರನ್ನು ಸೆಳೆಯಲು ಭರ್ಜರಿ ಪ್ರಚಾರವನ್ನು ಆರಂಭಿಸಿವೆ. 
ವರದಿಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಇಂದು ಪಂಜಾಬ್‌‌ನಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. 
 
ಪ್ರಧಾನಿ ಮೋದಿ ಜಲಂಧರ್‌ನಲ್ಲಿ ಚುನಾವಣಾ ರ‍್ಯಾಲಿ ನಡೆಯಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಅವರು ಅಕಾಲಿ-ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲಿದ್ದಾರೆ. ಜನವರಿ 29ರಿಂದ ಲುಧಿಯಾನಾದಲ್ಲವರು ಇನ್ನೊಂದು ರ‍್ಯಾಲಿಯನ್ನು ನಡೆಸಲಿದ್ದಾರೆ. 
 
ಪ್ರಧಾನಿ ಹೊರತಾಗಿ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ರಾಮಲಾಲ್, ನರೇಂದ್ರ ತೋಮರ್, ಅವಿನಾಶ್ ರೈ ಖನ್ನಾ ಬಿಜೆಪಿ ಅಭ್ಯರ್ಥಿಗಳಿಗಾಗಿ ಪ್ರಚಾರ ಕೈಗೊಳ್ಳಲಿದ್ದಾರೆ. 
 
ಅರವಿಂದ ಕೇಜ್ರಿವಾಲ್ ಮಧ್ಯಾಹ್ನ 12ಗಂಟೆಗೆ ಪಟಿಯಾಲಾದಲ್ಲಿ ರ‍್ಯಾಲಿಯನ್ನು ನಡೆಸಲಿದ್ದಾರೆ. 
 
ಕಾಂಗ್ರೆಸ್ ಉಪಾದ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಮೂರು ದಿನಗಳ ಕಾಲ ಪಂಜಾಬ್‌ನಲ್ಲಿ ಪ್ರಚಾರ ನಡೆಸಲಿದ್ದಾರೆ. ಇಂದವರು  ಅಮೃತಸರ್ ಮತ್ತು ಮಜಿಥಾಗಳಲ್ಲಿ ರ‍್ಯಾಲಿಯನ್ನು ನಡೆಸಲಿದ್ದಾರೆ. 
 
ಪಂಜಾಬ್‌ನಲ್ಲಿ ಫೆಬ್ರವರಿ 4 ರಂದು ಚುನಾವಣೆ ನಡೆಯುತ್ತಿದ್ದು ಮಾರ್ಚ್ 11 ರಂದು ಮತ ಎಣಿಕೆ ನಡೆಯಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

Karnataka Weather: ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ ಬರುವುದು ಪಕ್ಕಾ

ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವಂ ವೇಳೆ ಗೋಡೆ ಕುಸಿದು ಎಂಟು ಭಕ್ತರು ಸಾವು

ಮುಂದಿನ ಸುದ್ದಿ
Show comments