Webdunia - Bharat's app for daily news and videos

Install App

ಆಂಧ್ರ- ಓರಿಸ್ಸಾ ಗಡಿಯಲ್ಲಿ ಎನ್‌ಕೌಂಟರ್: 21 ನಕ್ಸಲರ ಮಾರಣಹೋಮ

Webdunia
ಸೋಮವಾರ, 24 ಅಕ್ಟೋಬರ್ 2016 (14:26 IST)
ಆಂಧ್ರಪ್ರದೇಶ- ಓರಿಸ್ಸಾ ಗಡಿಯಲ್ಲಿರುವ ಮಲಕನಗಿರಿ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ನಿಗ್ರಹಪಡೆ 21 ನಕ್ಸಲರನ್ನು ಹತ್ಯೆ ಮಾಡಿದ್ದು ಹಲವರನ್ನು ಗಂಭೀರವಾಗಿ ಗಾಯಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆಂಧ್ರ ಪೊಲೀಸರ ಪ್ರಕಾರ,  ಒರಿಸ್ಸಾ ಮತ್ತು ಆಂಧ್ರಪ್ರದೇಶದ ನಕ್ಸಲ್ ನಿಗ್ರಹ ಪಡೆಗಳು ಜಂಟಿಯಾಗಿ ನಡೆಸಿದ ಎನ್‌ಕೌಂಟರ್‌ನಲ್ಲಿ 21 ನಕ್ಸಲರು ಸಾವನ್ನಪ್ಪಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಮತ್ತು ನಕ್ಸಲ್ ನಿಗ್ರಹ ದಳದ ಯೋಧನೊಬ್ಬ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ನಕ್ಲಸ್ ನಿಗ್ರಹ ಪಡೆ ಮತ್ತು ನಕ್ಸಲರ ನಡುವೆ ಸುಮಾರು ಒಂದು ಗಂಟೆ ಗುಂಡಿನ ಚಕಮಕಿ ನಡೆದಿದೆ. ನಕ್ಸಲರಿಂದ ನಾಲ್ಕು ಎಕೆ-47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
 
ನಕ್ಸಲರೊಂದಿಗೆ ಏನ್‌ಕೌಂಟರ್ ಸುದ್ದಿ ತಿಳಿಯುತ್ತಿದ್ದಂತೆ ಆಂಧ್ರಪ್ರದೇಶಧ ಪೊಲೀಸ್ ಮಹಾನಿರ್ದೇಶಕ ನಂದೂರಿ ಸಾಂಬಶಿವಾರಾವ್ ಕೂಡಲೇ ವಿಶಾಖ್‌ಪಟ್ಟಣಂಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಅರಣ್ಯ ಪ್ರದೇಶದಲ್ಲಿ ಮತ್ತಷ್ಟು ನಕ್ಸಲರು ಅಡಗಿರುವ ಮಾಹಿತಿಯಿರುವುದರಿಂದ ಜಂಟಿ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments