Select Your Language

Notifications

webdunia
webdunia
webdunia
webdunia

ಭಾರತದ ಮೇಲೆ ಉಗ್ರರ ಕೆಂಗಣ್ಣು: ದೇಶದೊಳಗೆ 21 ಉಗ್ರರ ಪ್ರವೇಶ

ಭಾರತದ ಮೇಲೆ ಉಗ್ರರ ಕೆಂಗಣ್ಣು: ದೇಶದೊಳಗೆ 21 ಉಗ್ರರ ಪ್ರವೇಶ
ನವದೆಹಲಿ: , ಬುಧವಾರ, 24 ಮೇ 2017 (18:39 IST)
ಲಷ್ಕರ್-ಎ-ತೊಯಿಬಾ ಸಂಘಟನೆಯ 21 ಉಗ್ರರು ವಿಧ್ವಂಸಕ ಕೃತ್ಯಗಳನ್ನು ಎಸಗಲು ದೇಶವನ್ನು ಪ್ರವೇಶಿಸಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
 
ದೆಹಲಿ ಮತ್ತು ಮುಂಬೈ ಮಹಾನಗರಗಳಲ್ಲಿ ದುಷ್ಕ್ರತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ. ಈಗಾಗಲೇ 21 ಉಗ್ರರು ದೇಶದೊಳಗೆ ಪ್ರವೇಶಿಸಿದ್ದರಿಂದ ಎಲ್ಲಾ ಕಡೆ ಕಟ್ಟೆಚ್ಚರ ವಹಿಸುವಂತೆ ಗುಪ್ತಚರ ಅಧಿಕಾರಿಗಳು ಗೃಹ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ.
 
ದೇಶದ ವಿವಿಧೆಡೆ ಭಯೋತ್ಪಾದನೆ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಉಗ್ರರಿಗೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ, ಉಗ್ರರು ದಾಳಿಗೆ ಸ್ಕೇಚ್ ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಅಧಿಕಾರಿ ಮೂಲಗಳು ತಿಳಿಸಿವೆ.
 
ಮುಂಬೈ ಉಗ್ರರ ದಾಳಿಯ ಮಾದರಿಯಲ್ಲಿ ಕೃತ್ಯಗಳನ್ನು ಎಸಗಲು ಉಗ್ರರು ದೇಶದೊಳಗೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಕಚೇರಿ ಸಿಬ್ಬಂದಿಗೆ ಯಡಿಯೂರಪ್ಪ ತಾಕೀತು