Webdunia - Bharat's app for daily news and videos

Install App

ಉತ್ತರಪ್ರದೇಶ: 24 ಗಂಟೆಗಳಲ್ಲಿ ಸಿಡಿಲಿನ ಅಬ್ಬರಕ್ಕೆ 46 ಜನ ಬಲಿ

Webdunia
ಬುಧವಾರ, 22 ಜೂನ್ 2016 (13:40 IST)
ಉತ್ತರಪ್ರದೇಶದಲ್ಲಿ ಸಿಡಿಲಿನ ಅಬ್ಬರಕ್ಕೆ 24 ಗಂಟೆಗಳಲ್ಲಿಯೇ 46 ಜನ ಬಲಿಯಾಗಿ 35 ಕ್ಕೂ ಹೆಚ್ಚಿನ ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
 
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ವರ್ಷಧಾರೆಗೆ ಜನಜೀವನ ತತ್ತರಿಸಿದ್ದು, ಹಲವು ಗ್ರಾಮಗಳು ಜಲಾವೃತ್ತವಾಗಿವೆ. ನಿನ್ನೆ ಬೆಳಿಗ್ಗೆಯಿಂದ ರಾತ್ರಿಯವರಿಗೆ ಸುರಿದ ಮಳೆಯ ಸಂದರ್ಭದಲ್ಲಿ ಅಬ್ಬರಿಸಿದ ಸಿಡಿಲಿಗೆ 46 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.
 
ಸಿಡಿಲಿನಿಂದಾಗಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಬೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಿಡಿಲಿನಿಂದ ಮೃತರಾದವರಿಗೆ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಕೂಡಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅದಿಕಾರಿಗಳಿಗೆ ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments