ತೈಲ ಬೆಲೆಯೇರಿಸಿ ಸಂಗ್ರಹಿಸಿದ 25 ಲಕ್ಷ ಕೋಟಿ ರೂ. ಎಲ್ಲಿ?: ಕೇಂದ್ರಕ್ಕೆ ರಾಹುಲ್ ಪ್ರಶ್ನೆ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (11:31 IST)
ಕಣ್ಣೂರ್ : ನರೇಂದ್ರ ಮೋದಿ ನಾಯಕತ್ವದ ಕೇಂದ್ರ ಬಿಜೆಪಿ ಸರ್ಕಾರ ಜನಸಾಮಾನ್ಯರನ್ನು ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಕಾಮ್ಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ರೈತರು, ಸಣ್ಣಪುಟ್ಟ ವ್ಯಾಪಾರಿಗಳ ಜೇಬಿನಲ್ಲಿ ಅಳಿದುಳಿದ ರುಪಾಯಿಗಳನ್ನೂ ಮೋದಿ ಬಾಚಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಕಿಡಿ ಕಾರಿದ್ದಾರೆ.

ರಾಹುಲ್ ಅವರು ಕೇರಳದ ಕಣ್ಣೂರ್ ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯ ವರ್ಚುವಲ್ ಸಭೆಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭ ಅವರು ಕೇಂದ್ರದ ತೈಲ ಬೆಲೆಯೇರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗಿದ್ದರೂ ದೇಶದಲ್ಲಿ ಮಾತ್ರ ತೈಲ ಬೆಲೆ ಏರುತ್ತಲೇ ಇರುವ ಬಗ್ಗೆ ಅವರು ಅಚ್ಚರಿ ವ್ಯಕ್ತಪಡಿಸಿದರು.
ಇದೇ ವೇಳೆ ಇಂಧನ ಬೆಲೆಯೇರಿಕೆಯಿಂದ ಕೇಂದ್ರ ಸರ್ಕಾರ ೨೫ ಲಕ್ಷ ಕೋಟಿ ಹೆಚ್ಚುವರಿಯಾಗಿ ಸಂಗ್ರಹಿಸಿದ್ದು, ಈ ಹಣ ಏನಾಯಿತು ಎಂಬುದನ್ನು ಸರ್ಕಾರ ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ತೈಲ ಬೆಲೆಯೇರಿಕೆ ಮಾಡಿ ಸಂಗ್ರಹಿಸಿದ ಹೆಚ್ಚುವರಿ ಹಣವನ್ನು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಲ್ಲ ಎಂದು ರಾಹುಲ್ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments