Webdunia - Bharat's app for daily news and videos

Install App

ಕಾಶ್ಮೀರ: 3 ತಿಂಗಳಲ್ಲಿ 25 ಶಾಲೆ ಭಸ್ಮ

Webdunia
ಭಾನುವಾರ, 30 ಅಕ್ಟೋಬರ್ 2016 (13:09 IST)
ಹಿಜ್ಬುಲ್ ಮುಜಾಹಿದ್ದೀನ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬಳಿಕ ಕಣಿವೆ ನಾಡು ಕಾಶ್ಮೀರದಲ್ಲಿ ಉಂಟಾಗಿರುವ ಹಿಂಸಾಚಾರದಲ್ಲಿ ಅನೇಕ ಜೀವಗಳು ಬಲಿಯಾಗಿವೆ. ಹಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಈ ಉದ್ವಿಗ್ನತೆಯ ಬಿಸಿ ಶಿಕ್ಷಣ ವ್ಯವಸ್ಥೆಗೂ ತಟ್ಟಿದ್ದು ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ ಒಟ್ಟು 25 ಶಾಲೆಗಳಿಗೆ ಬೆಂಕಿ ಹಚ್ಚಲಾಗಿದೆ, 
 
ಶನಿವಾರ ಸಂಜೆ, ದಕ್ಷಿಣ ಅನಂತನಾಗ್ ಜಿಲ್ಲೆಯ ಬಟ್ಗುಂದದಲ್ಲಿ ಖಾಸಗಿ ಶಾಳೆಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಪೀಠೋಪಕರಣಗಳೆಲ್ಲ ಸುಟ್ಟು ಬೂದಿಯಾಗಿದೆ. ಇದು ದುಷ್ಕರ್ಮಿಗಳ ಅಟ್ಟಹಾಸಕ್ಕೆ ತುತ್ತಾದ 25ನೇ ಶಾಲೆಯಾಗಿದೆ ಎಂದು ರಾಜ್ಯ ಶಿಕ್ಷಣ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. 
 
 ಜುಲೈ 9 ರಂದು ಪ್ರತ್ಯೇಕತಾವಾದಿಗಳು ಬಂದ್‌ಗೆ ಕರೆ ನೀಡಿದ ಬಳಿಕ ಕಾಶ್ಮೀರದ ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡದಂತಿದೆ. ಸತತ 52 ದಿನಗಳ ಕಾಲ ರಾಜ್ಯದಲ್ಲಿ ಕರ್ಫ್ಯೂವನ್ನು ಕೂಡ ಹೇರಲಾಗಿತ್ತು.
 
ಅಧಿಕಾರಿಗಳು ಹೇಳುವ ಪ್ರಕಾರ ಇಲ್ಲಿಯವರೆಗೆ 25 ಶಾಲೆಗಳನ್ನು ಗುರಿಯಾಗಿಸಲಾಗಿದೆ. ಅದರಲ್ಲಿ ಕುಲ್ಗಾಮ್ ಜಿಲ್ಲೆಯೊಂದರಲ್ಲಿಯೇ 7 ಶಾಲೆಗಳು ಬೆಂಕಿಗಾಹುತಿಯಾಗಿವೆ. ಬುಡ್ಗಾಮ್‌ನಲ್ಲಿ ನಾಲ್ಕು, ಬಾರಾಮುಲ್ಲಾದಲ್ಲಿ ಮೂರು, ಶೊಪಿಯಾನ್, ಬಂಡಿಪೊರ್, ಗಂದೇರ್ಬಾಲ್, ಅನಂತ್ ನಾಗ್ ಜಿಲ್ಲೆದಗಳಲ್ಲಿ ತಲಾ ಎರಡು,ಮತ್ತು ಪುಲ್ವಾಮಾ, ಕುಪ್ವಾರಾ, ಶ್ರೀನಗರಗಳಲ್ಲಿ ತಲಾ ಒಂದು ಶಾಲೆಗಳು ದುಷ್ಕರ್ಮಿಗಳ ದಾಹಕ್ಕೆ ಬಲಿಯಾಗಿವೆ. ಅದರಲ್ಲಿ 11 ಶಾಲೆಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದರೆ ಮತ್ತೆ 14 ಭಾಗಶಃ ಹಾನಿಗೊಳಗಾಗಿವೆ.
 
25 ಶಾಲೆಗಳನ್ನು ಸುಟ್ಟಿರುವುದು 4,500ಕ್ಕೂ ಹೆಚ್ಚು ಮಕ್ಕಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಪರಿಣಾಮ ಬೀರಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments