Webdunia - Bharat's app for daily news and videos

Install App

ಜಮ್ಮು ಕಾಶ್ಮಿರ ಹಿಂಸಾಚಾರದಲ್ಲಿ 3550 ಪೊಲೀಸರು, 2309 ಜನರಿಗೆ ಗಾಯ: ಗೃಹ ಸಚಿವಾಲಯ

Webdunia
ಬುಧವಾರ, 27 ಜುಲೈ 2016 (20:48 IST)
ಜಮ್ಮು ಕಾಶ್ಮಿರದಲ್ಲಿ ನಡೆದ ಹಿಂಸಾಚಾರದಲ್ಲಿ 3550 ಭದ್ರತಾ ಪಡೆಗಳ ಸಿಬ್ಬಂದಿಗಳು ಮತ್ತು 2309 ಸಾಮಾನ್ಯ ನಾಗರಿಕರು ಗಾಯಗೊಂಡಿದ್ದಾರೆ ಎಂದು ಕೇಂದ್ರ ಸರಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
 
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಆಹಿರ್ ಮಾತನಾಡಿ, ಕಲ್ಲು ತೂರಾಟ ಸೇರಿದಂತೆ ಒಟ್ಟು 1029 ಹಿಂಸಾಚಾರ ಘಟನೆಗಳು ನಡೆದಿವೆ. ಹಿಂಸಾಚಾರದಲ್ಲಿ ಒಟ್ಟು 48 ನಾಗರಿಕರು ಮತ್ತು ಇಬ್ಬರು ಭದ್ರತಾ ಪಡೆಗಳ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
 
ಕಳೆದ ವರ್ಷದ ಅವಧಿಯಲ್ಲಿ 730 ಪ್ರತಿಭಟನೆಗಳು ನಡೆದಿತ್ತು. ಅದರಲ್ಲಿ ಐವರು ನಾಗರಿಕರು ಸಾವನ್ನಪ್ಪಿದ್ದು 240 ಜನರು ಮತ್ತು 886 ಭದ್ರತಾ ಸಿಬ್ಬಂದಿಗಳು ಕೂಡಾ ಗಾಯಗೊಂಡಿದ್ದರು ಎಂದು ಹೇಳಿದ್ದಾರೆ.
 
ಇಂತಹ ಘಟನೆಗಳನ್ನು ತಡೆಯಲು ಪೊಲೀಸ್ ಮತ್ತು ಜನಸಾಮಾನ್ಯರ ಸಭೆಗಳನ್ನು ಪೊಲೀಸ್ ಅಧಿಕಾರಿಗಳು ಆಯೋಜಿಸಿದ್ದಾರೆ. ಕಾನೂನು ಸುವ್ಯವಸ್ಥೆ ಸಂದರ್ಭದಲ್ಲಿ ಜನರೊಂದಿಗೆ ಮೃದುವಾಗಿ ವರ್ತಿಸುವಂತೆ ಕೋರಲಾಗಿದೆ ಎಂದು ತಿಳಿಸಿದ್ದಾರೆ.
 
ಪಾಕಿಸ್ತಾನದಿಂದ 90 ಬಾರಿ ಉಗ್ರರು ಜಮ್ಮು ಕಾಶ್ಮಿರ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಅದರಲ್ಲಿ 54 ಬಾರಿ ಯಶಸ್ವಿಯಾಗಿದ್ದಾರೆ. ಇದರಲ್ಲಿ 10 ಉಗ್ರರು ಸಾವನ್ನಪ್ಪಿದ್ದು 26 ಉಗ್ರರು ಓಡಿಹೋಗಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ ಸಚಿವ ಹಂಸರಾಜ್ ಆಹಿರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments