Webdunia - Bharat's app for daily news and videos

Install App

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ರಮಣೀಯ ತಾಣಗಳು

Webdunia
ಬುಧವಾರ, 22 ಜೂನ್ 2016 (10:31 IST)
ಮಳೆಗಾಲ ಶುರುವಾಗಿದೆ. ಪ್ರವಾಸ ಪ್ರಿಯರು ಪ್ರಕೃತಿ ಸೌಂದರ್ಯವನ್ನು ಆನಂದಿಸಲು ಉತ್ತಮ ಪ್ರವಾಸಿ ತಾಣಗಳನ್ನು ಹುಡುಕುವ ಸಮಯ ಬಂದಂತಾಗಿದೆ. ಈ ಮೂರು ಪ್ರಮುಖ ಸ್ಥಳಗಳ ವಿವರವನ್ನು ಪಡೆದುಕೊಂಡು ನಿಮ್ಮ ಪ್ರವಾಸವನ್ನು ಇಂದೇ ಆರಂಭಿಸಿ.
ಶೋಜಾ, ಹಿಮಾಚಲ ಪ್ರದೇಶ
 
ಹಿಮಾಚಲ ಪ್ರದೇಶದ ಕಣಿವೆಗಳಲ್ಲಿ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಅದ್ಭುತ ತಾಣ ಶೋಜಾ. ಈ ಪ್ರದೇಶ ಸಂಪೂರ್ಣವಾಗಿ ಅಭಿವೃದ್ಧಿ ಹೊಂದದಿದ್ದರು ಪ್ರಕೃತಿ ಸೌಂದರ್ಯದಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಪ್ರವಾಸಿಗರು ಜನಸಂದಣಿಯಿಂದ ತಪ್ಪಿಸಿಕೊಂಡು ಈ ಪ್ರದೇಶಕ್ಕೆ ಭೇಟಿ ನೀಡಿ ಪ್ರಕೃತಿ ಸೌಂದರ್ಯವನ್ನು ಸವಿಯಬಹುದಾಗಿದೆ.  
 
ದೇವಪ್ರಯಾಗ, ಉತ್ತರಾಖಂಡ್
 
ಉತ್ತರಾಖಂಡ್ ರಾಜ್ಯದ ಅಲಕನಂದಾ ಮತ್ತು ಭಾಗೀರಥಿ ನದಿತೀರದಲ್ಲಿರುವ ದೇವಪ್ರಯಾಗವೆಂಬ ಗ್ರಾಮ, ತನ್ನ ಪ್ರಕೃತಿ ಸೌಂದರ್ಯದಿಂದ ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿದೆ. ಈ ಗ್ರಾಮ ಆಧ್ಯಾತ್ಮ, ಸಂಪ್ರದಾಯ ಮತ್ತು ಪ್ರಾಚೀನ ಇತಿಹಾಸದ ತವರೂರಾಗಿದೆ. ಮುಂಗಾರು ಮಳೆ ತೀವ್ರವಾಗಿ ಸುರಿಯುವ ಹಿನ್ನೆಲೆಯಲ್ಲಿ ಈ ಗ್ರಾಮವನ್ನು ಎತ್ತರದಲ್ಲಿ ನಿರ್ಮಿಸಲಾಗಿದೆ. ಪ್ರವಾಸಿಗರು ಒಮ್ಮೆಯಾದರೂ ಈ ಪ್ರದೇಶಕ್ಕೆ ಭೇಟಿ ನೀಡಿ ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಸವಿಯಬೇಕಾಗಿದೆ.
 
ಓರ್ಚ್ಛಾ, ಮಧ್ಯಪ್ರದೇಶ
 
16 ನೇಯ ಶತಮಾನದಲ್ಲಿ ರಾಜಾ ರುದ್ರ ಪ್ರತಾಪ್ ಅವರು ಸ್ಥಾಪಿಸಿರುವ ಪುಟ್ಟ ಗ್ರಾಮ ಓರ್ಚ್ಛಾ. ಈ ಪ್ರದೇಶದಲ್ಲಿ ರಾಜಾ ರುದ್ರ ಪ್ರತಾಪ್ ಅವರು ನಿರ್ಮಿಸಿರುವ ದೇವಾಲಯ ಮತ್ತು ಕೋಟೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮಳೆಗಾಲದಲ್ಲಿ ಮೈ ತುಂಬಿ ಹರಿಯುವ ನದಿಗಳು ಮತ್ತು ವನ್ಯಮೃಗಗಳ ನೆಲೆಗಳು ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿವೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments