Webdunia - Bharat's app for daily news and videos

Install App

ರಾಜ್ಯದಲ್ಲಿ ಪ್ರತಿದಿನ 30,000 ಕೊರೊನಾ ಪರೀಕ್ಷೆ: ಸಿಎಂ ಬೊಮ್ಮಾಯಿ

Webdunia
ಬುಧವಾರ, 27 ಏಪ್ರಿಲ್ 2022 (14:59 IST)
ಕೊರೊನಾ ನಾಲ್ಕನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿದಿನ ಪರೀಕ್ಷೆ ಪ್ರಮಾಣವನ್ನು 30 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೊ ಕಾನ್ಫರೆನ್ಸ್‌ ಮೂಲಕ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಮಾಣ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇದೆ. ಆದರೆ ಏಪ್ರಿಲ್‌ 9ರಿಂದ ಹೆಚ್ಚಳ ಕಂಡು ಬಂದಿದೆ ಎಂದರು.
ಸಭೆಯಲ್ಲಿ ಪ್ರಧಾನಿ ಮೋದಿ ಹಲವಾರು ಸಲಹೆ ನೀಡಿದ್ದಾರೆ. ಅವರ ಸಲಹೆ ಮೇರೆಗೆ ಟೆಸ್ಟಿಂಗ್‌, ಟ್ರ್ಯಾಕ್‌, ಟ್ರೀಟ್‌ ಮೆಂಟ್ ಮುಂತಾದ ನಾಲ್ಕು ಸೂತ್ರ ಪಾಲಿಸಲಿದ್ದೇವೆ. ಬೆಂಗಳೂರಿನಲ್ಲಿ ಪ್ರತಿದಿನ 10 ಸಾವಿರ ಹಾಗೂ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಒಟ್ಟಾರೆ 20 ಸಾವಿರ ಕೊರೊನಾ ಪರೀಕ್ಷೆ ಮಾಡಲಾಗುವುದು ಎಂದರು.
ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗುವುದು ಶೇ.2 ರಷ್ಟು ರ್ಯಾಂಡಮ್‌ ಟೆಸ್ಟ್‌ ಮಾಡಲಾಗುವುದು. ಯುರೋಪ್‌ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ವಹಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ಕೊರೊನಾ ನಾಲ್ಕನೇ ಅಲೆ ಎದುರಿಸಲು ರಾಜ್ಯ ಸರಕಾರ ಸಂಪೂರ್ಣ ಸಜ್ಜಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ 50 ಸಾವಿರ ಹಾಸಿಗೆ ವ್ಯವಸ್ಥೆ ಇದ್ದರೆ, 1 ಲಕ್ಷ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ವ್ಯವಸ್ಥೆ ಇದೆ. ಇದರ ಜೊತೆ ಆಸ್ಪತ್ರೆಗಳಲ್ಲಿನ ಮೂಲ ಸೌಕರ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ವಿವರಿಸಿದರು.
ದೇಶದಲ್ಲಿ ಬಿಸಿಲು ಹೆಚ್ಚಾಗಿದೆ. ಅಗ್ನಿ ಅವಘಡಗಳು ಸಂಭವಿಸದಂತೆ ಆಸ್ಪತ್ರೆಗಳಲ್ಲಿ ಕೂಡ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಆಕ್ಸಿಜನ್‌ ವ್ಯವಸ್ಥೆಯನ್ನು 1300 ಮೆಟ್ರಿಕ್‌ ಟನ್‌ ಗೆ ಹೆಚ್ಚಿಸಲಿದ್ದೇವೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments