Webdunia - Bharat's app for daily news and videos

Install App

370ನೇ ವಿಧಿ ರದ್ದಿನಿಂದ ಕಾಶ್ಮೀರದಲ್ಲಿ ಹಿಂಸೆ ಇಳಿಕೆ

Webdunia
ಶನಿವಾರ, 26 ಮಾರ್ಚ್ 2022 (09:02 IST)
ನವದೆಹಲಿ : ಜಮ್ಮು ಹಾಗೂ ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಹಿಂಸಾತ್ಮಕ ಕೃತ್ಯಗಳಲ್ಲಿ ಇಳಿಕೆ ಕಂಡುಬಂದಿದ್ದು,

ಹೂಡಿಕೆ ಪರಿಸರ ನಿರ್ಮಾಣವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ. ಕಾಶ್ಮೀರ ಬಜೆಟ್ ಮಂಡಿಸುವ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿದ ನಿರ್ಮಲಾ, ‘ಕಾಶ್ಮೀರದಲ್ಲಿ 890 ಕೇಂದ್ರೀಯ ಕಾನೂನು ಅಳವಡಿಸಲಾಗಿದೆ.

ಇದರಿಂದ ಮೊದಲು ಹಕ್ಕುಗಳಿಂದ ವಂಚಿತರಾದವರು ಈಗ ಸರ್ಕಾರಿ ಉದ್ಯೋಗಗಳನ್ನು ಪಡೆಯಬಹುದಾಗಿದೆ.

ಆಸ್ತಿ ಖರೀದಿಸಬಹುದಾಗಿದೆ. ಇದಲ್ಲದೇ ಅನ್ಯಾಯ, ತಾರತಮ್ಯ ಮಾಡುವ 250 ರಾಜ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕಾಶ್ಮೀರದಲ್ಲಿ ಕೈಗಾರಿಕಾ ಸ್ಥಾಪನೆಯ ಹಾದಿ ಸುಲಭವಾಗಿದ್ದು, ಹೂಡಿಕೆ ಪರಿಸರ ನಿರ್ಮಾಣವಾಗಿದೆ ಎಂದರು.

ಅಲ್ಲದೇ 2021ರಲ್ಲಿ ಕಾಶ್ಮೀರದಲ್ಲಿ ಒಳನುಸುಳುವಿಕೆ ಪ್ರಮಾಣ ಶೇ. 33ಕ್ಕೆ ಇಳಿಕೆಯಾಗಿದೆ. ಕದನ ವಿರಾಮ ಉಲ್ಲಂಘನೆಯಲ್ಲಿ ಶೇ. 90ರಷ್ಟುಇಳಿಕೆ, ಶೇ.61ರಷ್ಟುಭಯೋತ್ಪಾದಕ ಕೃತ್ಯಗಳಲ್ಲಿ ಇಳಿಕೆ ಹಾಗೂ ಉಗ್ರರಿಂದ ಅಪಹರಣಕ್ಕೊಳಗಾಗುವ ಪ್ರಮಾಣ ಶೇ.80 ರಷ್ಟುಇಳಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments