Webdunia - Bharat's app for daily news and videos

Install App

ಅಪಾರ್ಟ್‌ಮೆಂಟ್‌ನಿಂದ ಬಿದ್ದು 4 ವರ್ಷದ ಬಾಲಕಿ ಸಾವು...!!!

ಗುರುಮೂರ್ತಿ
ಗುರುವಾರ, 22 ಫೆಬ್ರವರಿ 2018 (16:25 IST)
ನಾಲ್ಕು ವರ್ಷದ ಬಾಲಕಿಯೊಬ್ಬಳು ಅಪಾರ್ಟ್‌ಮೆಂಟ್‌ನ 10 ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಉತ್ತರಪ್ರದೇಶ ರಾಜ್ಯದ ಘಾಜಿಯಾಬಾದ್‌ನಲ್ಲಿರುವ ಇಂದಿರಾಪುರಂ ರೆಸಿಡೆನ್ಸಿಯಲ್ ಸೊಸೈಟಿ ವಲಯದಲ್ಲಿ ನಡೆದಿದೆ.

ಮೃತಪಟ್ಟಿರುವ ಬಾಲಕಿಯ ಹೆಸರು ಮೈರಾ ಸಚಿದೇವ್ ಆಗಿದ್ದು, ಮನೆಯ ಬಾಲ್ಕನಿಯಲ್ಲಿ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಘಟನೆ ಸಂಭವಿಸಿದ ತತ್‌ಕ್ಷಣ ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಸ್ಪತ್ರೆ ತಲುಪುವಷ್ಟರಲ್ಲೇ ಮಗು ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
 
ಮನಿಷ್ ಸಚಿದೇವಾ ಈ ಬಾಲಕಿಯ ತಂದೆಯಾಗಿದ್ದು ಈತ ತನ್ನ ಕುಟುಂಬದವರೊಡನೆ ಜೈಪುರಿಯಾ ಸನ್‌ರೈಸ್ ಗ್ರೀನ್ಸ್ ಅಪಾರ್ಟಮೆಂಟ್‌ನ 10 ನೇ ಮಹಡಿಯಲ್ಲಿರುವ ಪ್ಲಾಟ್ ಸಂಖ್ಯೆ 1002 ರಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಈ ಘಟನೆ ನಡೆದ ವೇಳೆ ಆ ಮಗುವಿನ ತಾಯಿ ತನ್ನ ಹಿರಿಯ ಮಗಳನ್ನು ಟ್ಯೂಶನ್ ಕ್ಲಾಸ್‌ನಿಂದ ಕರೆತರಲು ಹೊರ ಹೋಗಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಅಷ್ಟೇ ಅಲ್ಲ ಮನೆಯ ಬಾಲ್ಕನಿಯಲ್ಲಿದ್ದ ಸ್ಟೂಲ್ ಈ ದುರಂತಕ್ಕೆ ಮುಖ್ಯ ಕಾರಣವಾಗಿದ್ದು, ಆಟವಾಡುತ್ತಾ ಬಾಲ್ಕನಿಗೆ ತೆರಳಿದ ಬಾಲಕಿ, ಆ ಸ್ಟೂಲನ್ನು ಹತ್ತಿ ಕೆಳಕ್ಕೆ ಬಗ್ಗಿದಾಗ ಆಯ ತಪ್ಪಿ ಕೆಳಕ್ಕೆ ಬಿದ್ದಿದ್ದಾಳೆ ಎಂದು ಹೇಳಲಾಗುತ್ತಿದೆ.
 
ಪೋಷಕರ ನಿರ್ಲಕ್ಷತೆಯೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿದ್ದು ಈ ಕುರಿತಂತೆ ಹುಡುಗಿಯ ಪೋಷಕರು ಯಾವುದೇ ಹೇಳಿಕೆಯನ್ನು ನೀಡುತ್ತಿಲ್ಲ. ಈ ಘಟನೆಯ ಕುರಿತು ತನಿಖೆಯನ್ನು ಆರಂಭಿಸಿರುವ ಪೊಲೀಸರು ಈ ಘಟನೆಯ ಕುರಿತಾಗಿರುವ ಸಾಕ್ಷಿಗಳು ಮತ್ತು ಸೆಕ್ಯೂರಿಟಿ ಗಾರ್ಡ್‌ರನ್ನು ಪ್ರಶ್ನಿಸಿ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments