ಯೋಗಿ ರಾಜ್ಯದಲ್ಲಿ ಮಕ್ಕಳ ಮರಣ ಮೃದಂಗ: 48 ಗಂಟೆಗಳಲ್ಲಿ 42 ಮಕ್ಕಳ ಸಾವು

Webdunia
ಬುಧವಾರ, 30 ಆಗಸ್ಟ್ 2017 (11:55 IST)
ಸಿಎಂ ಯೋಗಿ ಆದಿತ್ಯಾನಾಥ್ ರಾಜ್ಯದಲ್ಲಿ ಮಕ್ಕಳ ಮರಣ ಮೃದಂಗ ಮುಂದುವರೆದಿದೆ. ಉತ್ತರ ಪ್ರದೇಶದ ಗೋರಖ್ ಪುರದ ಬಿಆರ್`ಡಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಳೆದ 48 ಗಂಟೆಗಳಲ್ಲಿ 42 ನವಜಾತ ಶಿಶುಗಳು ಅಸುನೀಗಿವೆ.

ಆಸ್ಪತ್ರೆಯ ಮಕ್ಕಳ ತುರ್ತು ಚಿಕಿತ್ಸಾ ಘಟಕಗಳಾದ ಎನ್`ಐಸಿಯು ಮತ್ತು ಪಿಐಸಿಯುನಲ್ಲಿ ಮಕ್ಕಳ ಸಾವು ಸಂಭವಿಸಿದ್ದು, 7 ಮಕ್ಕಳು ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್`ನಿಂದ ಸಾವನ್ನಪ್ಪಿದ್ದು, ಉಳಿದ ಮಕ್ಕಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳಿಂದೀಚೆಗೆ ಬಿಆರ್`ಡಿ ಆಸ್ಪತ್ರೆಯಲ್ಲಿ ಹತ್ತಿರತ್ತಿರ 200 ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಆಗಸ್ಟ್ 11ರ ಹೊತ್ತಿಗೆ 5 ದಿನಗಳ ಅವಧಿಯಲ್ಲಿ ಆಕ್ಸಿಜನ್ ಕೊರತೆಯಿಂದ 60 ಮಕ್ಕಳು ಸಾವನ್ನಪ್ಪಿದ್ದವು. ಪ್ರಕರಣಕ್ಕೆ ಸಂಬಂಧಪಟ್ಟಂತೆ 9 ಮಂದಿಯ ವಿರುದ್ಧ ತನಿಖೆ ನಡೆಯುತ್ತಿದ್ದು, ಈ ಮಧ್ಯೆಯೇ ಮಕ್ಕಳ ಮರಣ ಮೃದಂಗ ಮುಂದುವರೆದಿದೆ. ಆಗಸ್ಟ್ 27ರಂದು ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ದಾಖಲಾಗಿದ್ದ 342 ಮಕ್ಕಳ ಪೈಕಿ 17 ಮಕ್ಕಳು ಸಾವನ್ನಪ್ಪಿವೆ. ಆಗಸ್ಟ್ 28ರಂದು 344 ರೋಗಿಗಳ ಪೈಕಿ 25 ಮಕ್ಕಳು ಸಾವನ್ನಪ್ಪಿವೆ.

ಉತ್ತರ ಪ್ರದೇಶವಲ್ಲದೇ ಬಿಹಾರ, ನೇಪಾಳದಿಂದಲೂ ಬಿಆರ್`ಡಿ ಆಸ್ಪತ್ರೆಗೆ ಬಹಳಷ್ಟು ಜನ ಬರುತ್ತಾರೆ. ಇಲ್ಲಿಗೆ ದೂರದ ಊರುಗಳಿಂದ ಬರಲು ಕನಿಷ್ಠ 2 ಗಂಟೆ ಸಮಯ ಹಿಡಿಯುವುದರಿಂದ ಮಕ್ಕಳು ಆಸ್ಪತ್ರೆಗೆ ಬರುವ ಹೊತ್ತಿಗೆ ಗಂಭೀರ ಸ್ಥಿತಿ ತಲುಪಿರುತ್ತಾರೆ ಎನ್ನಲಾಗಿದೆ. ನವಜಾತ ಶಿಶುಗಳನ್ನ ಕಾಡುತ್ತಿರುವ ಎನ್ಸೆಫಾಲಿಟಿಸ್ ಚಿಕಿತ್ಸೆಗೆ ಹಲವೆಡೆ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ ತೆರೆದಿದೆಯಾದರೂ ಮಕ್ಕಳ ವೈದ್ಯರ ಕೊರತೆಯಿಂದ ಅವುಗಳು ಕಾರ್ಯನಿರ್ವಹಿಸುತ್ತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments