Webdunia - Bharat's app for daily news and videos

Install App

ದೇಶದಲ್ಲಿ 44 ಕೋಟಿ ದಾಟಿತು ಡೋಸ್; ಖಾಸಗಿ ಆಸ್ಪತ್ರೆಯಲ್ಲಿ ಬಳಕೆಯಾಗದೇ ಉಳಿದಿದೆ 3 ಕೋಟಿ ಲಸಿಕೆ!

Webdunia
ಭಾನುವಾರ, 25 ಜುಲೈ 2021 (08:42 IST)
ನವದೆಹಲಿ(ಜು.24): ದೇಶದಲ್ಲಿ ಲಸಿಕಾ ಅಭಿಯಾನದ ಮೂಲಕ ಭಾರತ ಕೊರೋನಾ ವಿರುದ್ಧ ಶಕ್ತ ಹೋರಾಟ ಮಾಡುತ್ತಿದೆ. ಇದೀಗ ದೇಶದ ಕೊರೋನಾ ಡೋಸ್ 44.53 ಕೋಟಿ ದಾಟಿದೆ. ಹೊಸ ಕೊರೋನಾ ನೀತಿಯಿಂದ ದೇಶದಲ್ಲಿ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಇದರಿಂದ ಖಾಸಗಿ ಆಸ್ಪತ್ರೆಗಳಲ್ಲಿ  2.98 ಕೋಟಿ ಡೋಸ್ಗಿಂತ ಹೆಚ್ಚು ಲಸಿಕೆ ಬಳಕೆಯಾಗದೇ ಉಳಿದಿದೆ.


•ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 44.53 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ಪೂರೈಕೆ
•ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿದಿರುವ 2.98 ಕೋಟಿ ಡೋಸ್ಗಿಂತ ಹೆಚ್ಚು
ದೇಶವ್ಯಾಪಿ ಲಸಿಕೆ ನೀಡಿಕೆ ಅಭಿಯಾನದ ಭಾಗವಾಗಿ, ಭಾರತ ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ಪೂರೈಸುತ್ತಾ ಬಂದಿದೆ. ಆಂದೋಲನ ಸಾರ್ವತ್ರೀಕರಣದ ಹೊಸ ಹಂತದಲ್ಲಿ ಕೇಂದ್ರ ಸರ್ಕಾರವು, ದೇಶೀಯ ಲಸಿಕೆ ತಯಾರಿಕಾ ಕಂಪನಿಗಳಿಂದ 75% ಲಸಿಕೆಯನ್ನು ಖರೀದಿಸಿ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಯನ್ನು ವಿತರಿಸುತ್ತಿದೆ.
ಒಟ್ಟು 44.53 ಕೋಟಿ ಡೋಸ್ ಗಿಂತ ಹೆಚ್ಚಿನ ಅಂದರೆ 44,53,86,390 ಡೋಸ್ ಲಸಿಕೆಯನ್ನು ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲ ಖರೀದಿ ಮೂಲಗಳಿಂದ ಈಗಾಗಲೇ ವಿತರಿಸಲಾಗಿದ್ದು, ಸದ್ಯದಲ್ಲೇ ಹೆಚ್ಚುವರಿ 85,58,360 ಡೋಸ್ ಲಸಿಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಭ್ಯವಾಗಲಿದೆ.
44.53 ಕೋಟಿ ಡೋಸ್ ಲಸಿಕೆಯ ಪೈಕಿ ಸವಕಳಿ ಸೇರಿದಂತೆ 41,55,50,543 ಡೋಸ್ ಲಸಿಕೆ ಬಳಕೆಯಾಗಿದೆ ಎಂಬ ವಿಚಾರ ಇಂದು ಬೆಳಗ್ಗೆ 8 ಗಂಟೆಗೆ ಬಿಡುಗಡೆ ಆಗಿರುವ ದತ್ತಾಂಶದಿಂದ ತಿಳಿದುಬಂದಿದೆ. ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 2.98 ಕೋಟಿಗಿಂತ ಹೆಚ್ಚಿನ ಡೋಸ್ ಅಂದರೆ 2,98,35,847 ಡೋಸ್ ಲಸಿಕೆ ಇನ್ನೂ ಬಳಕೆಗೆ ಲಭ್ಯವಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments