Webdunia - Bharat's app for daily news and videos

Install App

ಕೊಳವೆ ಬಿದ್ದ 5 ವರ್ಷದ ಕಂದಮ್ಮ: ಎರಡು ದಿನದಿಂದ ಆರ್ಯನ್‌ ರಕ್ಷಣೆಗೆ ಮುಂದುವರಿದ ಕಾರ್ಯಾಚರಣೆ

Sampriya
ಬುಧವಾರ, 11 ಡಿಸೆಂಬರ್ 2024 (17:59 IST)
Photo Courtesy X
ಜೈಪುರ: ದೇಶದಲ್ಲಿ ಮತ್ತೊಂದು ಕೊಳವೆಬಾವಿ ಅವಘಡ ಸಂಭವಿಸಿದೆ. ರಾಜಸ್ಥಾನದ ದೌಸಾದಲ್ಲಿ 150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಐದು ವರ್ಷದ ಮಗುವಿನ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ಕಾಳಿಖಾಡ್ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸುಮಾರಿಗೆ ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಆರ್ಯನ್ ತೆರೆದ ಕೊಳವೆ ಬಾವಿಗೆ ಬಿದ್ದಿದ್ದನು. ಒಂದು ತಾಸಿನ ಬಳಿಕ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಈಗಾಗಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿ 48 ತಾಸು ಕಳೆದಿದ್ದು, ಆರ್ಯನ್‌ನನ್ನು ಸುರಕ್ಷಿತವಾಗಿ ಹೊರತೆಗೆಯಲು ಪ್ರಯತ್ನ ನಡೆಯುತ್ತಿದೆ. ಮಗುವಿನ ಹತ್ತಿರ ತಲುಪಲು ಕೊಳವೆ ಬಾವಿಗೆ ಸಮಾನಾಂತರವಾಗಿ ಅಗೆಯಲಾಗುತ್ತಿದೆ. ಆದರೆ ರಕ್ಷಣಾ ಕಾರ್ಯಾಚರಣೆಯಲ್ಲಿ ಅನೇಕ ತೊಡಕುಗಳು ಎದುರಾಗುತ್ತಿವೆ

ಪ್ರದೇಶದಲ್ಲಿ ನೀರಿನ ಮಟ್ಟ ಸುಮಾರು 160 ಅಡಿ ಆಳದಲ್ಲಿ ಇರಬಹುದು ಎಂದು ಅಂದಾಜಿಸಲಾಗಿದೆ. ನೆಲದಡಿಯಲ್ಲಿ ತೇವದಿಂದಾಗಿ ಮಗುವಿನ ಚಲನವಲನವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಸಾಧ್ಯವಾಗುತ್ತಿಲ್ಲ. ನಾವು 150 ಅಡಿಗಳವರೆಗೆ ಹೋಗಬಹುದು. ಆದರೆ ಅದಕ್ಕಿಂತಲೂ ಕೆಳಗಡೆ ಹೋಗುವುದು ಸವಾಲಿನಿಂದ ಕೂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೊರೆಯುವ ಯಂತ್ರದ ನೆರವಿನಿಂದ 110 ಅಡಿಯವರೆಗೆ ಅಗೆಯಲಾಗಿದ್ದು, ಉಳಿದ 40 ಅಡಿ ಆಳದವರೆಗೆ ಡ್ರಿಲ್ ಮಾಡುವ ಯೋಜನೆ ಇದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments