Webdunia - Bharat's app for daily news and videos

Install App

ಇಂದಿನಿಂದ 500, 1000 ರೂ. ನೋಟುಗಳ ಚಲಾವಣೆ ಬಂದ್

Webdunia
ಬುಧವಾರ, 9 ನವೆಂಬರ್ 2016 (08:10 IST)
ದೇಶದಲ್ಲಿ ಬೇರೂರಿರುವ ಭಯೋತ್ಪಾದನೆ ಹಾಗೂ ಕಪ್ಪು ಹಣ ನಿಗ್ರಹಕ್ಕಾಗಿ ನಿನ್ನೆ ಮಧ್ಯ ರಾತ್ರಿಯಿಂದಲೇ 500, 1000 ರೂ. ನೋಟುಗಳ ಮುದ್ರಣ ಹಾಗೂ ಚಲಾವಣೆ ಬಂದ್ ಮಾಡಿರುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.ಈ ಮೂಲಕ ಕಪ್ಪುಹಣಕ್ಕೆ ಕಡಿವಾಣ ಹಾಕುತ್ತೇನೆ ಎಂದು ವಾಗ್ದಾನ ಮಾಡಿದ್ದ ಪ್ರಧಾನಿ ಮೋದಿಯವರದು ಹುಸಿ ಭರವಸೆ ಎಂದು ಸದಾ ಟೀಕಿಸುತ್ತಿದ್ದ ವಿರೋಧ ಪಕ್ಷಗಳಿಗೆ ದಿಟ್ಟ ಉತ್ತರ ನೀಡಿದ್ದಾರೆ.

ಕಪ್ಪು ಹಣ ಹಾಗೂ ಭಯೋತ್ಪಾದನೆ ಉದ್ದೇಶಿಸಿ ಮಾತನಾಡಿರುವ ಮೋದಿ, ಅನಿವಾರ್ಯವಾಗಿ ಇಂಥಹ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಿದೆ. ಭಾರತದಲ್ಲಿ ಬೇರೂರಿರುವ ಭಯೋತ್ಪಾನೆಗೆ ಈ ಮುಖ ಬೆಲೆಯ ನೋಟುಗಳೇ ಮೂಲ ಕಾರಣವಾಗಿದೆ. ಹಾಗೂ ಕಪ್ಪು ಹಣವು ಸಹ ಲೆಕ್ಕವಿಲ್ಲದಷ್ಟು ಸಂಖ್ಯೆಯಲ್ಲಿ ಗೌಪ್ಯವಾಗಿವೆ. ಇದು ದೇಶದ ಆರ್ಥಿಕ ಸ್ಥಿತಿಗತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ, ಪ್ರಗತಿಯನ್ನು ಕುಂಠಿತಗೊಳಿಸುತ್ತಿವೆ ಎಂದರು.
 
500, 1000 ರೂ. ನೋಟುಗಳ ಚಲಾವಣೆ ಏಕಾಏಕಿ ಬಂದ್ ಮಾಡಿರುವುದರಿಂದ ಸಾರ್ವಜನಿಕರಿಗೆ ಸ್ವಲ್ಪ ಸಮಸ್ಯೆಯಾಗುತ್ತದೆ. ಆದರೆ, ಇದರ ಸಕಾರಾತ್ಮಕ ಪರಿಣಾಮ ಕೆಲವೇ ದಿನಗಳಲ್ಲಿ ಗೊತ್ತಾಗುತ್ತದೆ. ಇಂತಹದ್ದೊಂದು ಕಠಿಣ ನಿರ್ಧಾರ ಮೊದಲೇ ತೆಗೆದುಕೊಳ್ಳಬಹುದಿತ್ತು ಎನ್ನುವ ಮಾತಗಳು ಕೇಳಿ ಬಂದರೂ ಅಚ್ಚರಿಯಿಲ್ಲ ಎಂದು ತಾವು ಕೈಗೊಂಡಿರುವ ನಿರ್ಧಾರದ ಭವಿಷ್ಯವೇನೆಂದು ಸೂಚ್ಯವಾಗಿ ತಿಳಿಸಿದರು.
 
ಒಟ್ಟಾರೆ ಪ್ರಧಾನಿ ಮೋದಿ ಅವರವ ಕಠಿಣ ನಿರ್ಧಾರ ಪ್ರಜ್ಞಾವಂತ ನಾಗರಿಕರ ಮೆಚ್ಚುಗೆಗೆ ಕಾರಣವಾಗಿರುವುದಲ್ಲದೆ, ಭ್ರಷ್ಟ ರಾಜಕಾರಣಿ ಹಾಗೂ ಕಪ್ಪು ಹಣ ಹೂಡಿಕೆದಾರರ ಎದೆ ನಡುಗಿಸುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಮುಂದಿನ ಸುದ್ದಿ
Show comments