500 ರೂ. ಸಾಲ ವಾಪಸ್ ಕೊಡದಿದ್ದಕ್ಕೆ ಹೊಡೆದು ಕೊಂದೇ ಬಿಟ್ಟ!

Webdunia
ಮಂಗಳವಾರ, 21 ಮಾರ್ಚ್ 2023 (09:25 IST)
ಕೋಲ್ಕತ್ತಾ : 500 ರೂ. ಸಾಲವನ್ನು ಹಿಂದಕ್ಕೆ ಕೊಡದಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದ ಘಟನೆ ಪಶ್ಚಿಮ ಬಂಗಾಳದ ಮಲ್ದಾ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಬನ್ಮಾಲಿ ಪ್ರಮಾಣಿಕ ಎಂದು ಗುರುತಿಸಲಾಗಿದೆ. ಬನ್ಮಾಲಿ ತನ್ನ ಪಕ್ಕದ ಮನೆ ನಿವಾಸಿ ಪ್ರಫುಲ್ಲಾ ರಾಯ್ ಬಳಿಯಿಂದ 500 ರೂ. ಸಾಲವಾಗಿ ಪಡೆದಿದ್ದರು. ಆದರೆ ಇದನ್ನು ನಿಗದಿತ ಸಮಯದೊಳಗೆ ಹಿಂದಿರುಗಿಸುವಲ್ಲಿ ಬನ್ಮಾಲಿ ವಿಫಲರಾದರು.
 
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಜಗಳ ನಡೆದಿತ್ತು.ಬನ್ಮಾಲಿ ಬಳಿ ಹಣ (500 ಡಿs) ಕೇಳಲು ರಾಯ್ ಭಾನುವಾರ ಸಂಜೆ ಬಂದಿದ್ದನು. ಆದರೆ ಈ ಸಂದರ್ಭದಲ್ಲಿ ಬನ್ಮಾಲಿ ಮನೆಯಲ್ಲಿ ಇರಲಿಲ್ಲ. ನಂತರ ಪಕ್ಕದ ಟೀ ಶಾಪ್ ಬಳಿ ಬನ್ಮಾಲಿ ಇರುವುದನ್ನು ಗಮನಿಸಿದ ರಾಯ್ ಅಲ್ಲಿಗೆ ತೆರಳಿದ್ದಾನೆ. ಅಂತೆಯೇ ಹಣ ಕೊಡುವಂತೆ ಕೇಳಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಬನ್ಮಾಲಿಗೆ ಬಿದಿರಿನ ಕೋಲಿನಲ್ಲಿ ಮನಬಂದಂತೆ ಥಳಿಸಿದ್ದಾನೆ. 

ಈ ಸಂಬಂಧ ಪ್ರತಿಕ್ರಿಯಿಸಿದ ಬನ್ಮಾಲಿ ಸಹೋದರ, ನನ್ನ ಅಣ್ಣ ಗೆಳೆಯರ ಜೊತೆ ಟೀ ಕುಡಿಯುತ್ತಾ ಕುಳಿತಿದ್ದನು. ಈ ವೇಳೆ ಏಕಾಏಕಿ ಬಂದ ರಾಯ್, ಹಿಗ್ಗಾಮುಗ್ಗ ಥಳಿಸಿದ್ದಾನೆ. ರಾಯ್ ತಲೆಗೆ ಹೊಡೆದ ಏಟಿಗೆ ಬನ್ಮಾಲಿ ಕುಸಿದು ಬಿದ್ದಿದ್ದಾನೆ. ಪ್ರಜ್ಞೆ ಬಂದ ಬಳಿಕ ಆತ ಮನೆಗೆ ನಡೆದುಕೊಂಡು ಹೋಗಿದ್ದಾನೆ ಎಂದರು.

ಇದಾದ ಮರು ದಿನ ಬನ್ಮಾಲಿ ರಕ್ತ ವಾಂತಿ ಮಾಡಲು ಆರಂಭಿಸಿದ್ದಾನೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಮಡು ಹೋಗಿದ್ದೇವೆ. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ ಮಾರ್ಗಮಧ್ಯೆಯೇ ಬನ್ಮಾಲಿ ಕೊನೆಯುಸಿರೆಳೆದಿರುವುದಾಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments