Webdunia - Bharat's app for daily news and videos

Install App

ಮಯನ್ಮಾರ್‌ನಲ್ಲಿ 6.8 ತೀವ್ರತೆಯ ಭೂಕಂಪ, ಬಂಗಾಳ್, ಬಿಹಾರ್, ಆಸ್ಸಾಂನಲ್ಲೂ ಕಂಪನದ ಅನುಭವ

Webdunia
ಬುಧವಾರ, 24 ಆಗಸ್ಟ್ 2016 (17:01 IST)
ಕೇಂದ್ರ ಮಯನ್ಮಾರ್‌ನಲ್ಲಿ ಬುಧವಾರ 6.8 ಪ್ರಮಾಣದಲ್ಲಿ ಪ್ರಬಲ ಭೂಕಂಪವಾಗಿದೆ ಎಂದು ಯುಎಸ್.ಜಿಯೋಲಾಜಿಕಲ್ ಸರ್ವೇ( ಯುಎಸ್‌ಜಿಎಸ್) ಮಾಹಿತಿ ನೀಡಿದೆ. ಭೂಕಂಪನದ ಪರಿಣಾಮ ದೇಶಾದ್ಯಂತ ಕಟ್ಟಡಗಳು ಅಲುಗಾಡಿವೆ ಎಂದು ತಿಳಿದು ಬಂದಿದೆ. 

 
ಮೈಕ್ಟಿಲಾ ಪಟ್ಟಣದ ಪಶ್ಚಿಮಕ್ಕೆ 143 ಕೀಲೋಮೀಟರ್‌ವರೆಗೆ, 84 ಕೀಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಮಾಹಿತಿ ಲಭಿಸಿದೆ. 
 
ಭಾರತದ ಪಶ್ಚಿಮ ಬಂಗಾಳ, ಜಾರ್ಖಂಡ, ಬಿಹಾರ್ ಮತ್ತು ಆಸ್ಸಾಂನಲ್ಲೂ  ಕಂಪನದ ಅನುಭವವಾಗಿದೆ. ಕಂಪನದ ಅನುಭವವಾದ ಕೂಡಲೇ ಕೋಲ್ಕತ್ತಾದಲ್ಲಿ ಮೆಟ್ರೋ ಸೇವೆಯನ್ನು ನಿಲ್ಲಿಸಲಾಗಿದೆ. 
 
ಎಲ್ಲಿಯೂ ಸಾವು ನೋವಿನ ವರದಿಯಾಗಿಲ್ಲ. 
 
ಕೇಂದ್ರ ಇಟಲಿಯಲ್ಲಿ ಬುಧವಾರ ಮುಂಜಾನೆ ಭಾರೀ ಭೂಕಂಪ ಸಂಭವಿಸಿದ್ದು ಕನಿಷ್ಠ  ಆರು ಜನರು ದುರ್ಮರವನ್ನಪ್ಪಿದ್ದಾರೆ. ಮುಂಜಾನೆ 03:36 ( 01:36 GMT)ರ ಸುಮಾರಿಗೆ ಪೆರುಗಿಯಾ ನಗರದ ಆಗ್ನೇಯಕ್ಕೆ ಭೂಮಿ ಕಂಪಿಸಿದ್ದು, ಮೊದಲ ಕಂಪನ ರಿಕ್ಟರ್ ಮಾಪಕದಲ್ಲಿ  6.2 ರಷ್ಟಿತ್ತು. ಬಳಿಕ ಅನೇಕ ಬಾರಿ ಕಂಪನ ಮುಂದುವರೆಯಿತು ಎಂದು ಮಾಹಿತಿ ಲಭಿಸಿದೆ.
 
ಕಟ್ಟಡಗಳ ಅಡಿಯಲ್ಲಿ ಹಲವರು ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments