Select Your Language

Notifications

webdunia
webdunia
webdunia
webdunia

ಉಗ್ರರ ದಾಳಿಗೆ 6 ಜನ ಅಮರನಾಥ ಯಾತ್ರಿಕರು ಬಲಿ: ಮಾಹಿತಿ ಪಡೆದ ರಾಜನಾಥ್ ಸಿಂಗ್

ಉಗ್ರರ ದಾಳಿಗೆ 6 ಜನ ಅಮರನಾಥ ಯಾತ್ರಿಕರು ಬಲಿ: ಮಾಹಿತಿ ಪಡೆದ ರಾಜನಾಥ್ ಸಿಂಗ್
ಶ್ರಿನಗರ , ಮಂಗಳವಾರ, 11 ಜುಲೈ 2017 (06:50 IST)
ಅನಂತ್ ನಾಗ್:ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ 6 ಜನ ಅಮರನಾಥ್ ಯಾತ್ರಿಕರು ಸಾವನ್ನಪ್ಪಿದ್ದಾರೆ. 12 ಯಾತ್ರಿಗಳು ಗಾಯಗೊಂಡಿದ್ದಾರೆ. 
 
ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪೊಂದು ಬೆಟೆಂಗೂ ಹಾಗೂ ಖನಬಾಲ್ ಪ್ರದೇಶದಲ್ಲಿ ಪೊಲೀಸ್ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ಗುಂಡಿನ ಚಕಮಕಿ ನಡೆಯುತ್ತಿದ್ದ ವೇಳೆಯೇ ದುರದೃಷ್ಟವಶಾತ್ ಅಮರನಾಥ ಯಾತ್ರಿಕರ ಬಸ್ ಒಂದು ಹಾದುಹೋಗಿದೆ. ಈ ವೇಳೆ ಬಸ್ ನಲ್ಲಿದ್ದ 6 ಯಾತ್ರಿಕರು ಸಾವನ್ನಪ್ಪಿದ್ದು, 12 ಯಾತ್ರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
 
ಅನಂತ್ ನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರ ಮೇಲೆ ಭಯೋತ್ಪಾದಕರ ದಾಳಿ ನಡೆದಿರುವುದರ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಜ್ಯಪಾಲರಿಂದ ಮಾಹಿತಿ ಪಡೆದಿದ್ದಾರೆ. ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಅಮರನಾಥ ಯಾತ್ರಿಗಳಿಗೆ ಭದ್ರತೆಯನ್ನು ಹೆಚ್ಚಿಸುವಂತೆ ಸೂಚಿಸಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬೆಳಗಾವಿ ನಗರದಲ್ಲಿ 3.11 ಕೋಟಿ ಹಳೇ ನೋಟುಗಳ ವಶ