Webdunia - Bharat's app for daily news and videos

Install App

60 ಅಂಶಗಳ ಕ್ರಿಯಾ ಯೋಜನೆ ಸಿದ್ಧ ಪಡಿಸಿದ ಕೇಂದ್ರ

Webdunia
ಬುಧವಾರ, 20 ಅಕ್ಟೋಬರ್ 2021 (10:39 IST)
ನವದೆಹಲಿ : ಜನನ ಪ್ರಮಾಣಪತ್ರಗಳನ್ನು ಪೌರತ್ವಕ್ಕೆ ಲಿಂಕ್ ಮಾಡುವುದರಿಂದ ಹಿಡಿದು ಉದ್ಯೋಗ, ವ್ಯಾಪಾರ ಜತೆಗೆ ‘ಕುಟುಂಬ ಡೇಟಾಬೇಸ್ ವಿನ್ಯಾಸ’ ವನ್ನು ಉತ್ತೇಜಿಸುವುದರಿಂದ ಹಿಡಿದು ವಲಯದ ಎಲ್ಲಾ ಇತರ ಕಾನೂನುಗಳನ್ನು ಒಳಗೊಂಡ ಏಕ ರೂಪ ಕಾಯ್ದೆ ಜಾರಿಗೊಳಿಸಲು ಕೇಂದ್ರವು ಸಮಗ್ರ 60 ಅಂಶಗಳ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ.

ಸೆಪ್ಟೆಂಬರ್ 18 ರಂದು ಎಲ್ಲಾ ಇಲಾಖೆ ಮತ್ತು ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮ್ಯಾರಥಾನ್ ಸಭೆ ನಡೆಸಿದ ನಂತರ ಈ ಕ್ರಿಯಾಯೋಜನೆ ಸಿದ್ಧವಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ಗೆ ಲಭಿಸಿದ ಕ್ರಿಯಾ ಯೋಜನೆಯ ದಾಖಲೆಯ ಪ್ರಕಾರ, “ಭಾರತದಲ್ಲಿ ಪೌರತ್ವಕ್ಕೆ ಯಾವುದೇ ಪುರಾವೆಗಳಿಲ್ಲ. ತಂತ್ರಜ್ಞಾನ ಮತ್ತು ಮುಖ್ಯವಾಹಿನಿಯ ಮೂಲಕ ಪೌರತ್ವವನ್ನು ಜನನ ಪ್ರಮಾಣಪತ್ರದೊಂದಿಗೆ ಲಿಂಕ್ ಮಾಡಬಹುದು ಎಂದಿದೆ.
“ಕಾರ್ಯಕಾರಿ ಸಲಹೆಗಳನ್ನು ” ಎಲ್ಲಾ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಸೆಪ್ಟೆಂಬರ್ 20 ರಂದು ಪ್ರಧಾನ ಮಂತ್ರಿಗಳ ನಿರ್ದೇಶನಗಳ ಮೇಲೆ “ತಕ್ಷಣದ ಕ್ರಮ” ತೆಗೆದುಕೊಳ್ಳುವಂತೆ ಮತ್ತು ಅವರ “ಸಮಯಕ್ಕೆ ಅನುಗುಣವಾದ ಅನುಷ್ಠಾನ” ವನ್ನು ಖಚಿತಪಡಿಸಿಕೊಳ್ಳಲು ಕಾರ್ಯದರ್ಶಿಗಳಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.
60-ಅಂಶಗಳ ಕ್ರಮವು ನಿರ್ದಿಷ್ಟ ಸಚಿವಾಲಯಗಳು ಮತ್ತು ಇಲಾಖೆಗಳನ್ನು ಗುರಿಯಾಗಿರಿಸಿಕೊಂಡಿದೆ. ಆಡಳಿತಕ್ಕಾಗಿ ಐಟಿ ಮತ್ತು ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವುದು, ವ್ಯಾಪಾರ ವಾತಾವರಣವನ್ನು ಸುಧಾರಿಸುವುದು ಮತ್ತು ನಾಗರಿಕ ಸೇವೆಗಳನ್ನು ಉನ್ನತೀಕರಿಸುವುದು – ಈ ಮೂರು ಗುರಿಗಳನ್ನು ಇದು ಹೊಂದಿದೆ ಎಂದು ಈ ಬಗ್ಗೆ ತಿಳಿದಿರುವವರೊಬ್ಬರು ವಿಶ್ಲೇಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments