Webdunia - Bharat's app for daily news and videos

Install App

ರೈಲ್ವೆ ಅಪಘಾತಗಳು ನಿಲ್ಲುತ್ತಿಲ್ಲ.. ಹಳಿತಪ್ಪಿದ ಮತ್ತೊಂದು ರೈಲು

Webdunia
ಗುರುವಾರ, 7 ಸೆಪ್ಟಂಬರ್ 2017 (11:02 IST)
ರೈಲ್ವೆ ಅಪಘಾತಗಳ ಸರಣಿ ಮುಂದುವರೆದಿದೆ. ಹೊಸ ರೈಲ್ವೆ ಸಚಿವರು ಬಂದ ಬಳಿಕ ಮೊದಲ ಅವಘಡ ಉತ್ತರಪ್ರದೇಶದಲ್ಲಿ ಸಂಭವಿಸಿದೆ. ಹೌರಾ-ಜಗಲ್ಪುರ್ ನಡುವೆ ಸಂಚರಿಸುತ್ತಿದ್ದ ಶಕ್ತಿ ಪುಂಜ್ ಎಕ್ಸ್ ಪ್ರೆಸ್ ರೈಲಿನ 7 ಬೋಗಿಗಳು ಹಳಿ ತಪ್ಪಿವೆ.
 

ಬೆಳಗ್ಗೆ 6.30ರ ಹೊತ್ತಿಗೆ ಒಬ್ರಾದಿಂದ ಹೊರಟ ರೈಲು  8.30ರ ಹೊತ್ತಿಗೆ ಹಳಿ ತಪ್ಪಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಹಳಿತಪ್ಪಿದ ಬೋಗಿಗಳಲ್ಲಿದ್ದ ಜನರನ್ನ ಮುಂಬದಿಯ ಬೋಗಿಗಳಿಗೆ ಸ್ಥಳಾಂತರಿಸಿದ್ದು, ಸುರಕ್ಷಿತವಾಗಿ ಕರೆದೊಯ್ಯಲಾಗಿದೆ. ಸಿಂಗುರೌಲಿ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಾಫಿ ಮತ್ತು ತಿಂಡಿ ವ್ಯವಸ್ಥೆ ಮಾಡಲಾಗಿದೆ.

ಆದರೆ, ರೈಲು ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಆ ಬಳಿಕವಷ್ಟೇ ತಿಳಿಸುವುದಾಗಿ ಸಚಿವರು ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಕಳೆದ ಕೆಲವೇ ತಿಂಗಳಲ್ಲಿ ಹಲವು ರೈಲ್ವೆ ಅಪಘಾತಗಳು ನಡೆದಿದ್ದು, ರೈಲ್ವೆ ಸಚಿವರ ತಲೆದಂಡವೂ ಆಗಿದೆ. ಈ ಅವಘಡಗಳ ಹಿಮದೆ ದುಷ್ಕರ್ಮಿಗಳ ಕೈವಾಡವಿರುವ ಬಗ್ಗೆಯೂ ಶಂಕೆ ವ್ಯಕ್ತವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments