Webdunia - Bharat's app for daily news and videos

Install App

ಪಾಕ್ ಪಡೆಗಳ ಗುಂಡಿನ ದಾಳಿ: ಓರ್ವ ಯೋಧ, ಬಾಲಕಿ ಬಲಿ

Webdunia
ಸೋಮವಾರ, 17 ಜುಲೈ 2017 (16:35 IST)
ಶ್ರೀನಗರ:ಜಮ್ಮು-ಕಾಶ್ಮೀರದ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹಾಗೂ ಓರ್ವ ಅಮಾಯಕ ಬಾಲಕಿ ಸಾವನ್ನಪ್ಪಿದ್ದಾರೆ.
 
ರಜೌರಿ ಸೆಕ್ಟರ್  ಹಾಗೂ ಪೂಂಚ್ ಜಿಲ್ಲೆಗಳಲ್ಲಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿದ್ದು, ಬೆಳಿಗ್ಗೆಯಿಂದಲೇ ಭಾರತೀಯ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಜೌರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಜಮ್ಮು-ಕಾಶ್ಮೀರದ ತ್ರಾಲ್ ಮೂಲದ ಯೋಧ ನಾಯಕ್ ಮುದ್ದಾಸರ್ ಅಹ್ಮದ್  ಹುತಾತ್ಮರಾಗಿದ್ದಾರೆ.
 
ಇದೇ ವೇಳೆ ಪೂಂಜ್ ಪ್ರದೇಶವನ್ನು ಗುರಿಯಾಗಿರಿಸಿ ಪಾಕ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕಿಯೊಬ್ಬಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಬಾಲಕಿಯನ್ನು ಪೂಂಜ್ ಜಿಲ್ಲೆಯ ಬಾಲಕೋಟ್ ನ 7 ವರ್ಷದ ಸೈದಾ ಎಂದು ಗುರುತಿಸಲಾಗಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments