Webdunia - Bharat's app for daily news and videos

Install App

ಪದ್ಮನಾಭ ದೇವಾಲಯದಲ್ಲಿ 186 ಕೋಟಿ ಮೌಲ್ಯದ 769 ಚಿನ್ನದ ತಟ್ಟೆಗಳು ನಾಪತ್ತೆ

Webdunia
ಮಂಗಳವಾರ, 16 ಆಗಸ್ಟ್ 2016 (14:16 IST)
ಕೇರಳದ ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ 186 ಕೋಟಿ ರೂಪಾಯಿಗಳ ಮೌಲ್ಯದ 769 ಚಿನ್ನದ ತಟ್ಟೆಗಳು ಕಾಣೆಯಾಗಿವೆ ಎಂದು ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಲಾಗಿದೆ.
 
ಸಿಎಜಿ ವಿನೋದ್ ರಾಯ್ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿದ್ದು, 186 ಕೋಟಿ ರೂಪಾಯಿಗಳ ಮೌಲ್ಯದ 769 ಚಿನ್ನದ ತಟ್ಟೆಗಳು ಕಾಣೆಯಾಗಿರುವ ಬಗ್ಗೆ ಸಮಗ್ರ ತನಿಖೆ ಅಗತ್ಯವಾಗಿದೆ ಎಂದು ತಮ್ಮ ವರದಿಯಲ್ಲಿ ದಾಖಲಿಸಿದ್ದಾರೆ. 
 
ಸುಪ್ರೀಂಕೋರ್ಟ್ ಆಕ್ಟೋಬರ್ 2015ರೊಳಗೆ ಪದ್ಮನಾಭ ದೇವಾಲಯದ ಸಂಪೂರ್ಣ ಲೆಕ್ಕಪರಿಶೋಧನಾ ವರದಿಯನ್ನು ನೀಡುವಂತೆ ಸಿಎಜಿ ವಿನೋದ್ ರಾಯ್‌ಗೆ ಕೋರ್ಟ್ ಆದೇಶ ನೀಡಿತ್ತು. 
 
ಚಿನ್ನವನ್ನು ಕರಗಿಸಿ ಪರಿಶುದ್ಧವಾಗಿಸಲು ಕಳೆಹಿಸಲಾದ ಶೇ.30 ರಷ್ಟು ಚಿನ್ನ ಕಳೆದುಹೋಗಿದ್ದು, ಕಳೆದು ಹೋದ ಚಿನ್ನದ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ ಎಂದು ರಾಯ್ ತಿಳಿಸಿದ್ದಾರೆ.
 
14 ಲಕ್ಷ ರೂಪಾಯಿಗಳ ಬೆಲೆಬಾಳುವ ಬೆಳ್ಳಿಯ ಬಾರ್ ಕಾಣೆಯಾಗಿದೆ. ಕೂಡಲೇ ದೇವಾಲಯದ ಭದ್ರತಾ ಸಿಬ್ಬಂದಿಯನ್ನು ಬದಲಿಸಿ, ದೇವಾಲಯದಲ್ಲಿರುವ ಚಿನ್ನದ ಆಭರಣಗಳಿಗಾಗಿ ಆಧುನಿಕ ಮ್ಯೂಸಿಯಂನಲ್ಲಿಟ್ಟು ಭಾರಿ ಭದ್ರತೆ ನೀಡುವ ಅನಿವಾರ್ಯತೆಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
 
ದೇವಾಲಯದಲ್ಲಿರುವ ಚಿನ್ನದ ಆಭರಣಗಳನ್ನು ರಕ್ಷಿಸಲು ನಿವೃತ್ತ ಎಐಎಸ್ ಅಧಿಕಾರಿಗಳ ಹೊಸ ಸಮಿತಿಯನ್ನು ರಚಿಸುವಂತೆ ಸಿಎಜಿ ವಿನೋದ್ ರಾಯ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments