Webdunia - Bharat's app for daily news and videos

Install App

ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಈ ಕಾರಣಕ್ಕೆ ಧ್ವಜಾರೋಹಣವಿಲ್ಲ

Krishnaveni K
ಗುರುವಾರ, 15 ಆಗಸ್ಟ್ 2024 (12:22 IST)
ನವದೆಹಲಿ: ದೇಶದೆಲ್ಲೆಡೆ ಇಂದು 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಮಾತ್ರ ಇಂದು ಸ್ವಾತಂತ್ರ್ಯೋತ್ಸವ ಆಚರಣೆಯಿಲ್ಲ. ಯಾಕೆ ಗೊತ್ತಾ?

ದೆಹಲಿ ಅಬಕಾರಿ ಅಕ್ರಮ ಪ್ರಕರಣದಲ್ಲಿ ಕೇಜ್ರಿವಾಲ್ ಇದೀಗ ಬಂಧನದಲ್ಲಿದ್ದಾರೆ. ತಮ್ಮ ಬದಲು ಸಚಿವೆ ಅತಿಶಿಗೆ ಧ್ವಜಾರೋಹಣ ನೆರವೇರಿಸಲು ಕೇಜ್ರಿವಾಲ್ ಸೂಚಿಸಿದ್ದರು. ಆದರೆ ಕೇಜ್ರಿವಾಲ್ ರ ಆದೇಶಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ತಡೆ ನೀಡಿದ್ದು, ಸಿಎಂ ಬದಲು ಸಿಎಂ ಅಧಿಕೃತ ನಿವಾಸದಲ್ಲಿ ಬೇರೆ ಯಾರೂ ಧ್ವಜಾರೋಹಣ ಮಾಡಬಾರದು ಎಂದು ಆದೇಶ ನೀಡಿದ್ದಾರೆ.

ಸದ್ಯಕ್ಕಂತೂ ಕೇಜ್ರಿವಾಲ್ ಹೊರಬರುವ ಸಾಧ್ಯತೆಯಿಲ್ಲ. ಹೀಗಾಗಿ ಈ ಬಾರಿ ಸ್ವಾತಂತ್ರ್ಯೋತ್ಸವಕ್ಕೆ ದೆಹಲಿ ಸಿಎಂ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣವೇ ನಡೆದಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್ ಪತ್ನಿ ಸುನೀತಾ ಇದೊಂದು ಬೇಸರದ ಸಂಗತಿ ಎಂದಿದ್ದಾರೆ.

ಆದರೆ ತಮ್ಮ ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿರುವ ಅತಿಶಿ ‘ಈ ದಿನ ಬ್ರಿಟಿಷರ ದಾಸ್ಯದಿಂದ ನಾವು ಸ್ವತಂತ್ರಾಗಿ ಸ್ವಾತಂತ್ರ್ಯ ಪಡೆದ ದಿನ. ಆದರೆ ಅಂದು ಸ್ವತಂತ್ರ ಭಾರತವಾದಾಗ ಯಾರೂ ಸ್ವತಂತ್ರ ಭಾರತದಲ್ಲಿ ಚುನಾಯಿತ ಮುಖ್ಯಮಂತ್ರಿಯೊಬ್ಬರನ್ನು ಸುಳ್ಳು ಕೇಸ್ ನಲ್ಲಿ ಬಂಧಿಸಿ ಜೈಲಿಗೆ ಹಾಕಬಹುದು ಎಂಬ ಕಲ್ಪನೆಯನ್ನೂ ಮಾಡಿರಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments