Webdunia - Bharat's app for daily news and videos

Install App

ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಈ ಕಾರಣಕ್ಕೆ ಧ್ವಜಾರೋಹಣವಿಲ್ಲ

Krishnaveni K
ಗುರುವಾರ, 15 ಆಗಸ್ಟ್ 2024 (12:22 IST)
ನವದೆಹಲಿ: ದೇಶದೆಲ್ಲೆಡೆ ಇಂದು 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಮಾತ್ರ ಇಂದು ಸ್ವಾತಂತ್ರ್ಯೋತ್ಸವ ಆಚರಣೆಯಿಲ್ಲ. ಯಾಕೆ ಗೊತ್ತಾ?

ದೆಹಲಿ ಅಬಕಾರಿ ಅಕ್ರಮ ಪ್ರಕರಣದಲ್ಲಿ ಕೇಜ್ರಿವಾಲ್ ಇದೀಗ ಬಂಧನದಲ್ಲಿದ್ದಾರೆ. ತಮ್ಮ ಬದಲು ಸಚಿವೆ ಅತಿಶಿಗೆ ಧ್ವಜಾರೋಹಣ ನೆರವೇರಿಸಲು ಕೇಜ್ರಿವಾಲ್ ಸೂಚಿಸಿದ್ದರು. ಆದರೆ ಕೇಜ್ರಿವಾಲ್ ರ ಆದೇಶಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ತಡೆ ನೀಡಿದ್ದು, ಸಿಎಂ ಬದಲು ಸಿಎಂ ಅಧಿಕೃತ ನಿವಾಸದಲ್ಲಿ ಬೇರೆ ಯಾರೂ ಧ್ವಜಾರೋಹಣ ಮಾಡಬಾರದು ಎಂದು ಆದೇಶ ನೀಡಿದ್ದಾರೆ.

ಸದ್ಯಕ್ಕಂತೂ ಕೇಜ್ರಿವಾಲ್ ಹೊರಬರುವ ಸಾಧ್ಯತೆಯಿಲ್ಲ. ಹೀಗಾಗಿ ಈ ಬಾರಿ ಸ್ವಾತಂತ್ರ್ಯೋತ್ಸವಕ್ಕೆ ದೆಹಲಿ ಸಿಎಂ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣವೇ ನಡೆದಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್ ಪತ್ನಿ ಸುನೀತಾ ಇದೊಂದು ಬೇಸರದ ಸಂಗತಿ ಎಂದಿದ್ದಾರೆ.

ಆದರೆ ತಮ್ಮ ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿರುವ ಅತಿಶಿ ‘ಈ ದಿನ ಬ್ರಿಟಿಷರ ದಾಸ್ಯದಿಂದ ನಾವು ಸ್ವತಂತ್ರಾಗಿ ಸ್ವಾತಂತ್ರ್ಯ ಪಡೆದ ದಿನ. ಆದರೆ ಅಂದು ಸ್ವತಂತ್ರ ಭಾರತವಾದಾಗ ಯಾರೂ ಸ್ವತಂತ್ರ ಭಾರತದಲ್ಲಿ ಚುನಾಯಿತ ಮುಖ್ಯಮಂತ್ರಿಯೊಬ್ಬರನ್ನು ಸುಳ್ಳು ಕೇಸ್ ನಲ್ಲಿ ಬಂಧಿಸಿ ಜೈಲಿಗೆ ಹಾಕಬಹುದು ಎಂಬ ಕಲ್ಪನೆಯನ್ನೂ ಮಾಡಿರಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments