Webdunia - Bharat's app for daily news and videos

Install App

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

Sampriya
ಬುಧವಾರ, 18 ಜೂನ್ 2025 (20:50 IST)
ಮುಂಬೈ: ಹವಾಮಾನ ವೈಪರೀತ್ಯ, ಕಾರ್ಯಾಚರಣೆ ಸಂಬಂಧಿತ  ಸೇರಿದಂತೆ ಅನೇಕ ಕಾರಣದಿಂದಾಗಿ ಮಂಗಳವಾರ ಮತ್ತು ಬುಧವಾರ ಏರ್‌ ಇಂಡಿಯಾದ ಕೆಲ ವಿಮಾನಗಳ ಹಾರಾಟ ರದ್ದಾಗಿದೆ. ಇನ್ನೂ ಕೆಲ ವಿಮಾನಗಳು ಮಾರ್ಗ ಬದಲಿಸಿದ್ದವು.

ಕಾರ್ಯಾಚರಣೆ ಸಂಬಂಧಿತ ಕಾರಣಗಳಿಂದಾಗಿ ಮುಂಬೈ–ಲಖನೌ ವಿಮಾನದ ಸಂಚಾರವನ್ನು ಜೂನ್ 17ರಂದು ರದ್ದು ಮಾಡಲಾಗಿತ್ತು. 

ಇನ್ನೂ ದೆಹಲಿಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕೆಲ ವಿಮಾನಗಳ ಹಾರಾಟದ ಮಾರ್ಗ ಕೂಡ ಬದಲಾವಣೆ ಮಾಡಲಾಗಿದೆ. ಅಲ್ಲದೆ ಪರ್ಯಾಯ ಮಾರ್ಗದಲ್ಲಿ ಸಾಗುವ ವಿಮಾನಗಳು ತಡವಾಗಿ ತಲುಪುತ್ತಿವೆ. ಲಖನೌಗೆ ವಿಮಾನ ಸಂಚಾರ ರದ್ದುಪಡಿಸಲು ಇವೆಲ್ಲ ಕಾರಣಗಳಾಗಿವೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಇನ್ನೂ ವಿಮಾನ ರದ್ದಾಗಿರುವುದರಿಂದ ಪ್ರಯಾಣಿಕರಿಗೆ ಹೋಟೆಲ್‌ ಸೌಲಭ್ಯ ಒದಗಿಸಲಾಗಿದೆ. ಪ್ರಯಾಣ ರದ್ದು ಮಾಡಿದ ಪ್ರಯಾಣಿಕರಿಗೆ ಪೂರ್ಣ ಪ್ರಮಾಣದಲ್ಲಿ ಹಣ ಹಿಂದಿರುಗಿಸಲಾಗುವುದು ಎಂದು ಅದು ಹೇಳಿದೆ. 

ಏರ್ ಇಂಡಿಯಾ ಸಂಸ್ಥೆಯು ಮಂಗಳವಾರ ಏಳು ಅಂತರರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರದ್ದು ಮಾಡಿತ್ತು. ಇದರೊಂದಿಗೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಪತನದ ಬಳಿಕ ಸಂಸ್ಥೆಯು ಸುಮಾರು 80 ವಿಮಾನಗಳ ಹಾರಾಟವನ್ನು ರದ್ದು ಮಾಡಿದಂತಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಮುಂದಿನ ಸುದ್ದಿ
Show comments