Webdunia - Bharat's app for daily news and videos

Install App

ಒಂಭತ್ತು ವರ್ಷದ ಬಾಲಕಿಗೆ ಕಾಮುಕರು ಇದೆಂಥಾ ಸ್ಥಿತಿ ತಂದಿಟ್ಟರು

Krishnaveni K
ಬುಧವಾರ, 6 ಮಾರ್ಚ್ 2024 (14:00 IST)
ಪುದುಚೇರಿ: ನಾಲ್ಕು ದಿನಗಳ ಮೊದಲು ನಾಪತ್ತೆಯಾಗಿದ್ದ ಪುದುಚೇರಿಯ ಒಂಭತ್ತು ವರ್ಷದ ಬಾಲಕಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಶಾಕ್ ಗೊಳಗಾಗುವಂತೆ ಮಾಡಿದೆ.

ಬಾಲಕಿ ಮುತ್ತಿಯಾಲ್ಪೇಟೆಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದಳು. ಮಾರ್ಚ್ 2 ರಂದು ಬಾಲಕಿ ಮನೆಗೆ ಬಂದಿಲ್ಲ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಬಾಲಕಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ಮನೆಯ ಸಮೀಪದ ಚರಂಡಿಯೊಂದರಲ್ಲಿ ಮೃತದೇಹ ಪತ್ತೆಯಾಗಿದೆ.

ಈ ಸಂಬಂಧ ಮೂವರು ಅಪ್ರಾಪ್ತರು ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಯುವ ಮೊದಲು ಬಾಲಕಿ ಮೇಲೆ ಈ ಕಾಮುಕರು ಅತ್ಯಾಚಾರವೆಸಗಿದ್ದರು. ಅತ್ಯಾಚಾರವೆಸಗುವಾಗಲೇ ಬಾಲಕಿ ಮೃತಪಟ್ಟಿದ್ದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಮಗು ಪತ್ತೆಯಾಗದ ಕಾರಣ ಆಕ್ರೋಶಗೊಂಡಿದ್ದ ಪೋಷಕರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಇದೀಗ ಆಕೆಯ ಮನೆಯ ಸಮೀಪವೇ ಚರಂಡಿಯೊಂದರಲ್ಲಿ ಗೋಣಿ ಚೀಲವೊಂದು ತೇಲಾಡುತ್ತಿದ್ದುದು ನೋಡಿ ಸಂಶಯಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಆಕೆಯ ಕೈ ಮತ್ತು ಕಾಲುಗಳು ಕಟ್ಟಿದ ಸ್ಥಿತಿಯಲ್ಲಿತ್ತು. ಇದೀಗ ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ. ಈ ಭೀಕರ ಅತ್ಯಾಚಾರ ಮತ್ತು ಹತ್ಯೆ ನೋಡಿ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲೂ ಮಗುವಿಗೆ ನ್ಯಾಯ ಕೊಡಿಸಿ ಎಂದು ಆಗ್ರಹ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments