Webdunia - Bharat's app for daily news and videos

Install App

ವಾರಕ್ಕೆ 90 ಗಂಟೆ ಕೆಲಸ: ಸುಬ್ರಹ್ಮಣ್ಯನ್‌ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಏನದ್ರು ಗೊತ್ತಾ

Sampriya
ಬುಧವಾರ, 15 ಜನವರಿ 2025 (17:30 IST)
Photo Courtesy X
ನವದೆಹಲಿ: ಎಲ್‌ಅಂಡ್‌ಟಿ ಕಂಪನಿ ಸಿಇಒ ಎಸ್‌.ಎನ್‌. ಸುಬ್ರಹ್ಮಣ್ಯನ್ ಅವರ ವಾರಕ್ಕೆ 90 ಗಂಟೆಗಳ ಕೆಲಸ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸುಬ್ರಹ್ಮಣ್ಯನ್ ಅವರ ಹೇಳಿಕೆಗೆ ಸಹಮತವಿಲ್ಲ ಎಂದಿದ್ದಾರೆ.

ಕಾರ್ಮಿಕರು ದಿನಕ್ಕೆ 8 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಬಾರದು ಎಂದು ಮಾಜಿ ಪ್ರಧಾನಿ ಜವಾಹರ ಲಾಲ್‌ ನೆಹರೂ ಮತ್ತು ಬಿ.ಆರ್‌.ಅಂಬೇಡ್ಕರ್ ಪ್ರತಿಪಾದಿಸಿದ್ದರು ಎಂದು ಖರ್ಗೆ ಹೇಳಿದ್ದಾರೆ.

ನೂತನವಾಗಿ ನಿರ್ಮಾಣಗೊಂಡಿರುವ ಪಕ್ಷದ ಕೇಂದ್ರ ಕಚೇರಿ ಉದ್ಘಾಟನೆ ಬಳಿಕ ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಈ ನೂತನ ಕಟ್ಟಡವನ್ನು ನಿರ್ಮಿಸಿದ ಎಲ್‌ಅಂಡ್‌ಟಿ ಕನ್‌ಸ್ಟ್ರಕ್ಷನ್‌ ಕಂಪನಿ, ಅದರ ವಾಸ್ತುಶಿಲ್ಪಿಗಳು ಮತ್ತು ಕಾರ್ಮಿಕರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಆದರೆ, ಕಂಪನಿ ಸಿಇಒ ಮಾಡಿರುವ ವಾರಕ್ಕೆ 90 ಗಂಟೆ ಕೆಲಸ ಹೇಳಿಕೆಗೆ ನನ್ನ ಅಸಮ್ಮತಿಯಿದೆ ಎಂದರು.

ಒಬ್ಬ ಕಾರ್ಮಿಕ 8 ಗಂಟೆಗಳ ಕಾಲ ಕೆಲಸ ಮಾಡಿ ಆಯಾಸಗೊಳ್ಳುತ್ತಾನೆ. ಅದಕ್ಕಾಗಿಯೇ ಅಂಬೇಡ್ಕರ್ ಮತ್ತು ನೆಹರೂ ಅವರು ಕಾರ್ಖಾನೆ ಕಾಯ್ದೆ ಜಾರಿಗೆ ತರುವಾಗ ಕಾರ್ಮಿಕರು ಎಂಟು ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸಬಾರದು ಎಂದಿದ್ದರು. ಹೀಗಾಗಿ ವಾರಕ್ಕೆ 90 ಗಂಟೆ ಕೆಲಸಕ್ಕೆ ಸಮ್ಮತಿಯಿಲ್ಲ ಎಂದು ಈ ಹಿಂದೆ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದ ಖರ್ಗೆ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments