Webdunia - Bharat's app for daily news and videos

Install App

ಮೂವರು ಅಪ್ರಾಪ್ತರಿಂದಲೇ 12ರ ಬಾಲಕನ ಭೀಕರ ಹತ್ಯೆ !

Webdunia
ಬುಧವಾರ, 17 ಮೇ 2023 (14:24 IST)
ಭೋಪಾಲ್ : 12 ವರ್ಷದ ಬಾಲಕನನ್ನು ಆತನ ಮೂವರು ಗೆಳೆಯರೇ ಸೈಕಲ್ ಸರಪಳಿಯಿಂದ ಕತ್ತು ಹಿಸುಕಿ, ತಲೆಗೆ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಹತ್ಯೆ ನಡೆಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ.
 
ಘಟನೆ ಭಾನುವಾರ ನಡೆದಿದ್ದು, ಸಿಯೋನಿ ಸಮೀಪದ ಮಗರ್ಕಥಾ ಗ್ರಾಮದಲ್ಲಿ ನಡೆದಿದೆ. ಮೂವರು ಆರೋಪಿಗಳೂ ಅಪ್ರಾಪ್ತರಾಗಿದ್ದು ಹತ್ಯೆ ನಡೆಸಿದ ಬಳಿಕ ಗೆಳೆಯನ ಶವವನ್ನು ಪಾಲಿಥಿನ್ ಚೀಲದಲ್ಲಿ ತುಂಬಿ ಎಸೆದಿದ್ದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆರೋಪಿ ಬಾಲಕರು ಕ್ರಮವಾಗಿ 16, 14 ಹಾಗೂ 11 ವರ್ಷ ವಯಸ್ಸಿನವರಾಗಿದ್ದಾರೆ. 16 ವರ್ಷದ ಆರೋಪಿ 12 ವರ್ಷದ ಬಾಲಕನ ಸಹೋದರಿಯೊಂದಿಗೆ ಮಾತನಾಡಲು ಪ್ರಯತ್ನಿಸಿದಾಗ ಅವರಿಬ್ಬರ ನಡುವೆ ವಾಗ್ವಾದ ನಡೆದಿದೆ. ಜಗಳ ಕೊನೆಗೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.

ವರದಿಗಳ ಪ್ರಕಾರ 16 ವರ್ಷದ ಆರೋಪಿ ಬಾಲಕ ತನ್ನ ಇನ್ನಿಬ್ಬರು ಸ್ನೇಹಿತರನ್ನು ಸೇರಿಸಿಕೊಂಡು ಸಂತ್ರಸ್ತ ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದಿದ್ದಾರೆ. ಅಲ್ಲಿ ಅವರು ಬಾಲಕನಿಗೆ ಸೈಕಲ್ ಚೈನ್ನಿಂದ ಕತ್ತು ಹಿಸುಕಿದ್ದಾರೆ. ಆತ ನೋವಿನಿಂದ ಅಳಲು ಪ್ರಾರಂಭಿಸಿದಾಗ ದೊಡ್ಡ ಕಲ್ಲಿನಿಂದ ಆತನ ತಲೆಯನ್ನು ಚಚ್ಚಿದ್ದಾರೆ. ಬಳಿಕ ಹರಿತವಾದ ಚಾಕುವಿನಿಂದ ಆತನ ಗಂಟಲನ್ನು ಸೀಳಿದ್ದಾರೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments