ಹೆಂಡತಿಯ ಮೇಲಿನ ಸಿಟ್ಟಿಗೆ ತನ್ನ ಎರಡು ವರ್ಷದ ಮಗಳ ಮೇಲೆಯೇ ಅತ್ಯಾಚಾರ ಮಾಡಿದ ಕ್ರೂರ ಅಪ್ಪ

Webdunia
ಶನಿವಾರ, 4 ಸೆಪ್ಟಂಬರ್ 2021 (09:30 IST)
ಹರಿಯಾಣ : ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಹರಿಯಾಣದ ಗುರುಗ್ರಾಮದಲ್ಲಿ ಕೇಳಿಬಂದಿದೆ. ಗುರುಗ್ರಾಮದ ಪಟೌಡಿ ಏರಿಯಾದಲ್ಲಿ ಅಪ್ಪನೇ ಮಗಳ ಮೇಲೆ ಈ ಕೃತ್ಯವನ್ನು ಮಾಡಿದ್ದಾನೆ ಎನ್ನಲಾಗಿದೆ. ಘಟನೆ ಆಗಸ್ಟ್ 28ರಂದು ನಡೆದಿದ್ದು, ಸೆಪ್ಟೆಂಬರ್ ಎರಡಕ್ಕೆ ಬೆಳಕಿಗೆ ಬಂದಿದೆ. ಈಗಾಗಲೇ ಪೊಲೀಸರು ಆರೋಪಿ ಅಪ್ಪನ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಗಂಡ - ಹೆಂಡತಿ ಹಸುಗೂಸನ್ನು ಕರೆದುಕೊಂಡು ಬಿಹಾರದಿಂದ ಹರಿಯಾಣದ ಗುರುಗ್ರಾಮಕ್ಕೆ ವಲಸೆ ಬಂದಿತ್ತು. ನಂತರ ಅಮ್ಮ ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರೆ, ಗಂಡ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಇಬ್ಬರ ನಡುವೆಯೂ ಆಗಾಗ ವಾಗ್ವಾದ ನಡೆಯುತ್ತಿತ್ತು, ಅದರ ಬೆನ್ನಲ್ಲೇ ಇದೇ ಆಗಸ್ಟ್ ತಿಂಗಳಲ್ಲಿ, ಹೆಂಡತಿ ಮತ್ತೊಂದು ಗಂಡಸಿನ ಜತೆ ಮದುವೆಯಾಗಿದ್ದರು. ಈ ಮೂಲಕ ಸುಮಾರು ಮೂರು ವರ್ಷಗಳ ಕಾಲದ ಸಂಸಾರ ಅಂತ್ಯವಾಗಿತ್ತು.
ಆಗಸ್ಟ್ 28ರಂದು, ಹಳೆಯ ಗಂಡ ಹೆಂಡತಿಯ ಮನೆಗೆ ನುಗ್ಗಿದ್ದಾನೆ. ತಾಯಿ - ಮಗು ಮಲಗಿಕೊಂಡಿದ್ದಾಗ ಬಂದು ದಾಂಧಲೆ ಮಾಡಿದ ಗಂಡ, ಒಳಗಿಂದ ಮನೆಯ ಬೀಗ ಹಾಕಿಕೊಂಡಿದ್ದಾನೆ. ಪ್ರತಿರೋಧ ವ್ಯಕ್ತಪಡಿಸಲು ಯತ್ನಿಸಿದರಾದರೂ, ಆಕೆಗೆ ಸಾಧ್ಯವಾಗಿಲ್ಲ. ಅಕ್ಕಪಕ್ಕದವರು ಬಂದು ಬಾಗಿಲು ತಟ್ಟಿದರೂ ಆತ ಬಾಗಿಲನ್ನು ತೆರೆಯಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಾನು ನನ್ನ ಮಗಳು ಮಲಗಿದ್ದಾಗ ಗಂಡ ಮನೆಗೆ ಬಂದ. ಬಂದವನೇ ಮನೆಯ ಒಳಗಿನಿಂದ ಬೀಗ ಹಾಕಿ, ಕೀಲಿ ತೆಗೆದಿಟ್ಟುಕೊಂಡ. ಜತೆಗೆ ಮಗಳನ್ನು ರೂಮಿನೊಳಗೆ ಹಾಕಿ ತಾನೂ ಒಳಗೆ ಹೋದ. ನಾನು ಎಷ್ಟು ಗೋಗರೆದರೂ ಬಾಗಿಲು ತೆಗೆಯಲಿಲ್ಲ. ಕೆಲ ಹೊತ್ತಿನ ಬಳಿಕ ಬಾಗಿಲನ್ನು ತೆರೆದ ಅವನು, ಯಾರಿಗಾದರೂ ಹೇಳಿದರೆ ಸರಿ ಇರುವುದಿಲ್ಲ, ಸಾಯಿಸುತ್ತೇನೆ ಎಂದು ಬೆದರಿಸಿದ. ನನ್ನ ಮಗಳು ಅಳುತ್ತ ಇದ್ದಳು. ಆಕೆ ನೆಲದ ಮೇಲೆ ಬಿದ್ದು ಒದ್ದಾಡುತ್ತಿದ್ದಳು. ಅವಳ ಗುಪ್ತಾಂಗಗಳ ಮೇಲೆ ಗಾಯಗಳಾಗಿದ್ದು, ರಕ್ತಸ್ರಾವವಾಗುತ್ತಿತ್ತು, ಎಂದು ಹೆಂಡತಿ ದೂರಿನಲ್ಲಿ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನಾವಳಿಗಳ ನಂತರ ಹೆಂಡತಿ ಆಕೆಯ ಸಂಬಂಧಿಕರೊಬ್ಬರಿಗೆ ಕರೆ ಮಾಡಿ ನಡೆದ ಘಟನೆಯ ಬಗ್ಗೆ ತಿಳಿಸಿದ್ದಾರೆ. ಇದಾದ ಬೆನ್ನಲ್ಲೇ ಸಂಬಂಧಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಮಂಗಳವಾರ ಪೊಲೀಸರು ಈ ಸಂಬಂಧ ಅಧಿಕೃತ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments