Publish Date: Sat, 16 Oct 2021 (10:47 IST)
Updated Date: Sat, 16 Oct 2021 (10:52 IST)
ರಾಯ್ಪುರ : ಛತ್ತೀಸಗಢದ ಜಶ್ಪುರದಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ದುರ್ಗಾ ದೇವಿಯ ಪ್ರತಿಮೆ ವಿಸರ್ಜನೆಗೆ ಹೊರಟಿದ್ದ ಭಕ್ತರ ಮೇಲೆ ಕಾರ್ ಹತ್ತಿಸಲಾಗಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, 26 ಜನ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಜಶ್ಪುರದ ಪತ್ಥಲ್ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ಬಳಿಕ ಕಾರಿಗೆ ಬೆಂಕಿ ಹಚ್ಚಿ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕಾರ್ ನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗುತ್ತಿದೆ. ಅಧಿಕೃತವಾಗಿ ದೃಢಪಟ್ಟಿಲ್ಲ.