Webdunia - Bharat's app for daily news and videos

Install App

ಅವಶೇಷಗಳಡಿ ಜನಿಸಿದ ಮಗು..!

Webdunia
ಗುರುವಾರ, 9 ಫೆಬ್ರವರಿ 2023 (14:13 IST)
ಹುಟ್ಟು ಸಾವು ಎಲ್ಲವೂ ದೈವಿಚ್ಛೆ ಎನ್ನುವ ಮಾತು ಅಕ್ಷರಶಃ ನಿಜವಾಗಿದೆ. ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಆದರೆ ಅದೇ ಅವಶೇಷಗಳಡಿ ಮಗುವೊಂದು ಜನಿಸಿದ್ದು, ಹೊಕ್ಕುಳ ಬಳ್ಳಿ ಕತ್ತರಿಸುವ ಮುನ್ನವೇ ತಾಯಿ ಮೃತಪಟ್ಟಿದ್ದು, ಮಗುವನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಭಾರತದಿಂದ ಪರಿಹಾರ ಮತ್ತು ರಕ್ಷಣಾ ತಂಡಗಳು ಟರ್ಕಿ ತಲುಪಿವೆ. ವೈದ್ಯಕೀಯ ತಂಡವೂ ಇದೆ. ಅವಶೇಷಗಳಡಿ ಇನ್ನೂ ಸಾವಿರಾರು ಜನರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರ ರಕ್ಷಣಾ ಕಾರ್ಯ ವೇಗವಾಗಿ ನಡೆಯುತ್ತಿದೆ. ಜನರು ರಾತ್ರಿಯಿಡೀ ತಮ್ಮ ಪ್ರೀತಿಪಾತ್ರರನ್ನು ಹುಡುಕುತ್ತಲೇ ಇದ್ದಾರೆ. ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜೀವಂತವಾಗಿರಬಹುದು, ಅದಕ್ಕಾಗಿಯೇ ರಕ್ಷಣಾ ತಂಡವು ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಇದೇ ವೇಳೆ ಭೂಕಂಪನದ ಅನಾಹುತದ ಇಂತಹ ಕೆಲವು ಕಥೆಗಳು ಮುನ್ನೆಲೆಗೆ ಬಂದಿದ್ದು, ಕೇಳಿ ಎಲ್ಲರ ಮನದಲ್ಲಿ ತುಂಬಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments