Webdunia - Bharat's app for daily news and videos

Install App

ವೈಎಸ್ಆರ್ ಕುಟುಂಬದಲ್ಲಿ ಬಿರುಕು?

Webdunia
ಶುಕ್ರವಾರ, 3 ಸೆಪ್ಟಂಬರ್ 2021 (10:37 IST)
ಹೈದರಾಬಾದ್: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಸ್ಮರಣಾರ್ಥ, ಅವರ ಪತ್ನಿ ವೈ.ಎಸ್.ವಿಜಯಮ್ಮ ಅವರು ಗುರುವಾರ ಇಲ್ಲಿ ಏರ್ಪಡಿಸಿದ್ದ ಸಭೆಗೆ ಅವರ ಪುತ್ರ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಗೈರಾಗಿದ್ದರು.

ಹೈದರಾಬಾದಿನಲ್ಲಿ ನಡೆದ 12ನೇ ವಾರ್ಷಿಕೋತ್ಸವ ಸಭೆಗೆ ಜಗನ್ ಹಾಜರಾಗದಿರುವುದು ಮತ್ತು ಎಡುಪುಲಪಾಯದಲ್ಲಿ ನಡೆದ ಕಾರ್ಯಕ್ರಮಗಳನ್ನು ಗಮನಿಸಿದರೆ ವೈಎಸ್ಆರ್ ಕುಟುಂಬದಲ್ಲಿ ಬಿರುಕು ಮೂಡಿರಬಹುದು ಎಂದು ರಾಜಕೀಯ ವಿಶ್ಲೇಷಕರು ಸಂಶಯ ಪಟ್ಟಿದ್ದಾರೆ. ಜಗನ್ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರು ತೆಲಂಗಾಣ ರಾಜಕೀಯಕ್ಕೆ ಧುಮುಕಿದ್ದರಿಂದ ಈ ಬಿರುಕು ಮೂಡಿದೆ ಎಂಬುದು ಅವರ ವಿಶ್ಲೇಷಣೆ.
ಜಗನ್ ಅವರು ತನ್ನ ರಾಜಕೀಯ ಚಟುವಟಿಕೆಯನ್ನು ಆಂಧ್ರ ಪ್ರದೇಶಕ್ಕೆ ಸೀಮಿತಗೊಳಿಸಿಕೊಂಡಿದ್ದಾರೆ. ಅವರ ಸಹೋದರಿ ಶರ್ಮಿಳಾ ಅವರು ಸಹೋದರನ ಅಸಮ್ಮತಿಯ ಹೊರತಾಗಿಯೂ ತೆಲಂಗಾಣ ರಾಜಕೀಯ ಪ್ರವೇಶಿಸಿದ್ದಾರೆ.
ಹೈದರಾಬಾದ್ ಸ್ಟಾರ್ ಹೋಟೆಲ್ನಲ್ಲಿ ಸಂಜೆ ನಡೆದ ಕೂಟದಲ್ಲಿ ವೈಎಸ್ಆರ್ ನಿಷ್ಠರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ಮಾಜಿ ಅಧಿಕಾರಿಗಳು ಭಾಗವಹಿಸಿದ್ದರು. ರಾಜಕೀಯವಾಗಿ ಶರ್ಮಿಳಾ ಅವರ ಕೈಬಲಪಡಿಸುವ ನಿಟ್ಟಿನಲ್ಲಿ ಈ ಸಭೆ ನಡೆದಿದೆ ಎಂದು ಹೇಳಲಾಗುತ್ತಿದೆ. ಜುಲೈ 8ರಂದು ವೈಎಸ್ಆರ್ ಜನ್ಮ ದಿನಾಚರಣೆಯಂದು ಶರ್ಮಿಳಾ ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು (ವೈಎಸ್ಆರ್ಟಿಪಿ) ಘೋಷಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments