Webdunia - Bharat's app for daily news and videos

Install App

ಹಣವಿಲ್ಲದಾಗ 13 ವರ್ಷದ ಪುತ್ರಿಯನ್ನೇ ಪಣಕ್ಕಿಟ್ಟ ತಂದೆ

Webdunia
ಮಂಗಳವಾರ, 12 ಡಿಸೆಂಬರ್ 2023 (11:24 IST)
ಜೂಜಿನ ಹವ್ಯಾಸ ಹೊಂದಿದ್ದ ತಂದೆಯೊಬ್ಬ ನೆರೆಮನೆಯ ಯುವಕನೊಂದಿಗೆ ಜೂಜಾಡಲು ಕುಳಿತಿದ್ದ. ಹಣ, ಚಿನ್ನವನ್ನು ಕಳೆದುಕೊಂಡ ನಂತರ ಪುತ್ರಿಯನ್ನು ಕಣಕ್ಕಿಟ್ಟು ಸೋತ. ಕೂಡಲೇ ಎರಡು ಕುಟುಂಬಗಳು ವಿವಾಹಕ್ಕಾಗಿ ಸಿದ್ದತೆ ನಡೆಸತೊಡಗಿದವು. ನಂತರ ಪೊಲೀಸರ ಮಧ್ಯಪ್ರವೇಶದಿಂದ ವಿವಾಹ ರದ್ದಾದ ಘಟನೆ ನಡೆದಿದೆ.
 
ಬುರಿತಾಲಾ ಗ್ರಾಮದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಜೂಜುಕೋರ ತಂದೆಯೊಬ್ಬ ಹಣವನ್ನು ಸೋತು ಕಂಗಾಲಾದ ನಂತರ ತನ್ನ 13 ವರ್ಷ ವಯಸ್ಸಿನ ಪುತ್ರಿಯನ್ನೇ ಪಣಕ್ಕಿಟ್ಟು ಸೋತು ಮಗಳನ್ನು ಎದುರಾಳಿಗೆ ಕೊಟ್ಟು ವಿವಾಹ ಮಾಡಿಕೊಡಲು ದಿನಾಂಕ ಗೊತ್ತುಪಡಿಸಿದ ಘಟನೆ ವರದಿಯಾಗಿದೆ.
 
ಡಿಸೆಂಬರ್ 9 ರಂದು ಪುತ್ರಿಯ ನಿಶ್ಚಿತಾರ್ಥ ನಡೆದಾಗ ಗ್ರಾಮದ ಹಿರಿಯರು ಸಂಬಂಧಿಕರು ಹಾಜರಿದ್ದರು.  ಮದುವೆ ಫಿಕ್ಸ್ ಮಾಡಲಾಗಿತ್ತು. 8ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ತನಗಿಂತ ಎರಡು ಪಟ್ಟು ಹೆಚ್ಚು ವಯಸ್ಸಿನ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥವಾಗಿದ್ದರಿಂದ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು.
 
ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿರುವ ಗ್ರಾಮಕ್ಕೆ ಭೇಟಿ ನೀಡಿದ ಎನ್‌ಜಿಒ ತಂಡ, ಅಪ್ರಾಪ್ತ ಬಾಲಕಿಯ ನಿಶ್ಚಿತಾರ್ಥವಾದ ಸುದ್ದಿ ತಿಳಿದು ಕೂಡಲೇ ಮದುವೆಯನ್ನು ರದ್ದುಗೊಳಿಸುವಂತೆ ಆದೇಶಿಸಿತು.
 
ಜಿಲ್ಲೆಯ ಸಮಾಜ ಕಲ್ಯಾಣ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಆರೋಪಿ ತಂದೆ ಮತ್ತು ನೆರೆಮನೆಯಾತನ ಮನೆಯ ಮೇಲೆ ದಾಳಿ ಮಾಡಿ ಬಂಧಿಸುವಲ್ಲಿ ಯಶಸ್ವಿಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments