Webdunia - Bharat's app for daily news and videos

Install App

ಮೂರು ವರ್ಷದ ಮಗಳನ್ನೇ ಕೊಡಲಿಯಿಂದ ಕೊಚ್ಚಿದ ತಂದೆ!

Webdunia
ಸೋಮವಾರ, 28 ಮಾರ್ಚ್ 2022 (08:29 IST)
ಅಗರ್ತಲಾ : ಮಲಗಿದ್ದ ಮಗಳನ್ನು ತಂದೆಯೊಬ್ಬರು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತ್ರಿಪುರಾದ ಗೋಮತಿ ಜಿಲ್ಲೆಯ ಮಹಾರಾಣಿಯಲ್ಲಿ ನಡೆದಿದೆ.

ಶಿವ ಚೌಹಾಣ್(32) ಬಂಧಿತ ಆರೋಪಿ ಹಾಗೂ ಸ್ಮೃತಿ ಕುಮಾರಿ ಚೌಹಾಣ್ ಮೃತ ದುರ್ದೈವಿ. ಇಟ್ಟಿಗೆ ಗೂಡು ಕಾರ್ಮಿಕರಾದ ಶಿವ ಚೌಹಾಣ್ ಅವರು ತಮ್ಮ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳೊಂದಿಗೆ ಇಟ್ಟಿಗೆ ಗೂಡು ಸಂಕೀರ್ಣದ ಶೆಡ್ನಲ್ಲಿ ವಾಸಿಸುತ್ತಿದ್ದರು.

ಬಿಹಾರ ಮೂಲದ ಶಿವ ಚೌಹಾಣ್ ಸುಮಾರು ಮೂರು ತಿಂಗಳ ಹಿಂದೆ ತ್ರಿಪುರಾಗೆ ಬಂದಿದ್ದರು. ಸ್ಮೃತಿ, ಶಿವ ಚೌಹಾಣ್ನ ಕಿರಿಯ ಮಗಳಾಗಿದ್ದಳು. ಭಾನುವಾರ ಮುಂಜಾನೆ ನಿದ್ದೆಯಲ್ಲಿದ್ದ ಮೂರು ವರ್ಷದ ಮಗಳನ್ನು ಅಂಗಳಕ್ಕೆ ಕರೆದೊಯ್ದು ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. 

ಈ ಬಗ್ಗೆ ಇಟ್ಟಿಗೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ಮಲ್ ಚಕ್ರವರ್ತಿ ರಾಧಾಕಿಶೋರಪುರ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಶಿವ ಚೌಹಾಣ್ ಅವರನ್ನು ಬಂಧಿಸಿದ್ದಾರೆ.

ಕೊಲೆಯ ಹಿಂದಿನ ಕಾರಣ ತಿಳಿಯಲು ತನಿಖೆ ಮಾಡಲಾಗುತ್ತಿದೆ ಎಂದು ರಾಧಾಕಿಶೋರಪುರ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಬಬನ್ ದಾಸ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ