Webdunia - Bharat's app for daily news and videos

Install App

ಮಾಂಸ ತಂದಿಲ್ಲ ಎಂದು ಜಗಳ, ಪತ್ನಿಯ ಕೊಲೆಯಲ್ಲಿ ಅಂತ್ಯ!

Webdunia
ಮಂಗಳವಾರ, 28 ಮಾರ್ಚ್ 2023 (12:09 IST)
ಲಕ್ನೋ : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಪತ್ನಿ ಬರ್ಬರ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತಪ್ರದೇಶದ ಆಲಿಘರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿ ಪತ್ನಿಯನ್ನು ಗುಡ್ಡೋ(30) ಎಂದು ಗುರುತಿಸಲಾಗಿದೆ. ಈಕೆಯನ್ನು ಪತಿ ಸಾಗಿರ್ ಕೊಲೆಗೈದಿದ್ದಾನೆ. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ.
 
ಇಂದು (ಸೋಮವಾರ) ಮಾಂಸ ತರದಿದ್ದಕ್ಕೆ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಸಿಟ್ಟಿನಿಂದ ಸಾಗಿರ್, ಅಲ್ಲೇ ಇದ್ದ ಚಾಕು ತೆಗೆದುಕೊಂಡು ಮಕ್ಕಳ ಮುಂದೆಯೇ ಪತ್ನಿಯ ಕತ್ತು ಸೀಳಿದ್ದಾನೆ.  ಇತ್ತ ಅಮ್ಮನನ್ನು ಕೊಲೆ ಮಾಡಿದ್ದರಿಂದ ಭಯಗೊಂಡ ಮಕ್ಕಳು ಜೋರಾಗಿ ಕಿರುಚಾಡಿವೆ. ಇದರಿಂದ ಅಕ್ಕಪಕ್ಕದ ನಿವಾಸಿಗಳು ಓಡಿಬಂದಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ಅಲ್ಲದೆ ಆರೋಪಿ ಸಾಗಿರ್ ನ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಮೂವರು ಮಕ್ಕಳಲ್ಲಿ ಓರ್ವ ಮಗಳು, ಪೊಲೀಸರಿಗೆ ನಡೆದ ಘಟನೆಯನ್ನು ಎಳೆಎಳೆಯಾಗಿ ವಿವರಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

ಮುಂದಿನ ಸುದ್ದಿ
Show comments