Webdunia - Bharat's app for daily news and videos

Install App

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

Sampriya
ಬುಧವಾರ, 20 ಆಗಸ್ಟ್ 2025 (13:01 IST)
Photo Credit X
ಭೋಪಾಲ್: 18 ವರ್ಷದ ಮಾಜಿ ವಿದ್ಯಾರ್ಥಿಯೊಬ್ಬ ಪ್ರೀತಿಯನ್ನು ನಿರಾಕರಿಸಿದ್ದ ಅತಿಥಿ ಶಿಕ್ಷಕಿಯ ಮೇಲೆ ಬೆಂಕಿ ಹಚ್ಚಿದ ಭಯಾನಕ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. 

ಸೂರ್ಯಾಂಶ್ ಕೊಚಾರ್ ಎಂಬಾತ ಶಿಕ್ಷಕಿ ಮೇಲೆ ಬೆಂಕಿ ಹಚ್ಚಿದ ಆರೋಪಿ. ಘಟನೆಯಿಂದ 26 ವರ್ಷದ ಶಿಕ್ಷಕಿಗೆ ಶೇಕಡಾ 25 ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಜಬಲ್ಪುರ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ.

ಪೊಲೀಸರ ಪ್ರಕಾರ ಆರೋಪಿ ಪೆಟ್ರೋಲ್ ತುಂಬಿದ ಬಾಟಲಿಯನ್ನು ಹೊತ್ತುಕೊಂಡು ಶಿಕ್ಷಕಿಯ ಮನೆಗೆ ಹೋಗಿದ್ದಾನೆ. ಪೆಟ್ರೋಲ್‌ ಅನ್ನು ಅವಳ ಮೇಲೆ ಸುರಿದು, ಬೆಂಕಿ ಹಂಚಿದ್ದಾನೆ. ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಸ್ತುತ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸುಟ್ಟಗಾಯಗಳು ಗಂಭೀರವಾಗಿದ್ದರೂ ಜೀವಕ್ಕೆ ಅಪಾಯವಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ.

ಆರೋಪಿ ಮತ್ತು ಶಿಕ್ಷಕಿ ಎರಡು ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದರು. ಸೂರ್ಯಾಂಶು ಆಕೆಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ. ಆದರೆ, ಎರಡು ವರ್ಷಗಳ ಹಿಂದೆ ಶಿಕ್ಷಕಿ ಪಾಠ ಮಾಡುತ್ತಿದ್ದ ಶಾಲೆಯಿಂದ ಆರೋಪಿಯನ್ನು ಹೊರಹಾಕಲಾಗಿತ್ತು.

‌ಈ ಘಟನೆಯು ಶಿಕ್ಷಕಿಯು ಕೆಲಸ ಮಾಡುತ್ತಿದ್ದ ಉತ್ಕೃಷ್ಟ ಶಾಲೆಯ ಎಲ್ಲರನ್ನೂ ಆಘಾತಗೊಳಿಸಿದೆ. ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಗಳು ಮುಂದುವರೆದಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಖರ್ಚು ಮಾಡ್ತಿರೋದು ಕನ್ನಡಿಗರ ಹಣ: ಆರ್ ಅಶೋಕ್ ಕಿಡಿ

ದಿನಕ್ಕೆ ಎಷ್ಟು ಕಪ್ ಕಾಫಿ ಕುಡಿಯಬಹುದು: ಡಾ ಸಿಎನ್ ಮಂಜುನಾಥ್ ಸಲಹೆ ನೋಡಿ

ಮುಂದಿನ ಸುದ್ದಿ
Show comments