ಲಿಂಗ ಬದಲಾವಣೆ ನೆಪದಲ್ಲಿ ತಂತಿಯಿಂದ ಸಲಿಂಗಕಾಮಿ ಮಹಿಳೆ ಹತ್ಯೆ!

Webdunia
ಗುರುವಾರ, 22 ಜೂನ್ 2023 (13:54 IST)
ಲಕ್ನೋ : ಲಿಂಗ ಬದಲಾವಣೆ ನೆಪದಲ್ಲಿ ತಂತ್ರಿಯೋರ್ವ ಸಲಿಂಗಕಾಮಿಯ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
 
ಆರ್ಸಿ ಮಿಷನ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರಿಯಾ (30) ಹತ್ಯೆಯಾದ ಮಹಿಳೆ. ಈಕೆ ಪುವಾಯನ್ ನಿವಾಸಿಯಾದ ಪ್ರೀತಿ (24) ಎಂಬವಳೊಂದಿಗೆ ಸ್ನೇಹ ಬೆಳೆಸಿದ್ದು, ಅವರಿಬ್ಬರ ಸ್ನೇಹ ಸಲಿಂಗ ಸಂಬಂಧವಾಗಿ ಪರಿವರ್ತನೆಯಾಗಿತ್ತು. ಅಲ್ಲದೇ ಪ್ರಿಯಾ ಜೊತೆಗಿನ ಸಂಬಂಧ ಬೆಳಕಿಗೆ ಬಂದ ಬಳಿಕ ಪ್ರೀತಿಗೆ ಬೇರೆಯವರನ್ನು ಮದುವೆಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್ ಆನಂದ್ ತಿಳಿಸಿದ್ದಾರೆ.

ಈ ಹಿನ್ನೆಲೆ ಪ್ರೀತಿ ಮತ್ತು ಆಕೆಯ ತಾಯಿ ಊರ್ಮಿಳ ಮೊಹಮ್ಮದಿ ಪ್ರದೇಶದ ನಿವಾಸಿಯಾದ ರಾಮನಿವಾಸ್ ಎಂಬ ತಂತ್ರಿಯನ್ನು ಭೇಟಿ ಮಾಡಿ ಪ್ರಿಯಾಳನ್ನು ಕೊಲ್ಲಲು ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ಅಲ್ಲದೇ ಪ್ರಿಯಾ ತನ್ನ ಲಿಂಗವನ್ನು ಬದಲಾಯಿಸಿಕೊಂಡು ಪುರುಷನಾಗಿ ಬದಲಾಗಲು ಬಯಸಿದ್ದಳು. ಇದರ ಲಾಭ ಪಡೆದ ಪ್ರೀತಿಯ ತಾಯಿ ಪ್ರಿಯಾಳನ್ನು ಕೊಲ್ಲುವ ಸಲುವಾಗಿ ತಂತ್ರಿಗೆ 1.5 ಲಕ್ಷ ರೂ. ನೀಡುವುದಾಗಿ ಆಮಿಷವೊಡ್ಡಿದ್ದಳು.

ಮಾಹಿತಿ ಆಧಾರದ ಮೇಲೆ ತಂತ್ರಿ ರಾಮನಿವಾಸ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ನಿಜಾಂಶ ಒಪ್ಪಿಕೊಂಡಿದ್ದಾನೆ. ಪುರುಷನನ್ನಾಗಿ ಪರಿವರ್ತಿಸುವ ನೆಪದಲ್ಲಿ ಪ್ರಿಯಾಳನ್ನು ಕಾಡಿಗೆ ಕರೆದೊಯ್ದು ನದಿಯ ದಡದಲ್ಲಿ ಕಣ್ಣುಮುಚ್ಚಿ ಮಲಗುವಂತೆ ತಂತ್ರಿ ಹೇಳಿದ್ದಾನೆ. ಆಕೆ ಆತನ ಮಾತನ್ನು ಒಪ್ಪಿ ಕಣ್ಣುಮುಚ್ಚಿ ಮಲಗಿದ್ದ ವೇಳೆ ಸುತ್ತಿಗೆ ಸಹಾಯದಿಂದ ಆಕೆಯ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ