Webdunia - Bharat's app for daily news and videos

Install App

ಗೌತಮ್ ಕೊಂದಿದ್ದು ದೆವ್ವವಲ್ಲ, ಕೌಟುಂಬಿಕ ಕಲಹ?

Webdunia
ಬುಧವಾರ, 13 ಜುಲೈ 2016 (06:44 IST)
'ಘೋಸ್ಟ್‌ ಬಸ್ಟರ್‌' ಎಂದೇ ಖ್ಯಾತಿ ಗಳಿಸಿದ್ದ ಟಿವಿ ಕಾರ್ಯಕ್ರಮಗಳ ನಿರೂಪಕ, ಅಧಿಸಾಮಾನ್ಯ ಸಂಶೋಧಕ ಗೌರವ್ ತಿವಾರಿ(31) ಅವರ ಸಾವಿಗೆ ಭೂತವಲ್ಲ. ಕೌಟುಂಬಿಕ ಕಲಹದಿಂದ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸಂಶಯ ವ್ಯಕ್ತ ಪಡಿಸಿದ್ದಾರೆ. 

ಪತಿ ಪತ್ನಿ ನಡುವೆ ಕೆಲ ಮನಸ್ತಾಪಗಳಿದ್ದವು. ಅದನ್ನು ಬಗೆಹರಿಸಲು ಕುಟುಂಬ ಪ್ರಯತ್ನ ಪಡುತ್ತಿತ್ತು. ಜತೆಗೆ ಆತನ ಅಧಿಸಾಮಾನ್ಯ ಸಂಶೋಧನೆ, ಅನಿಯಮಿತ ಕೆಲಸ, ಹೆಚ್ಚಿನ ಸಂಪಾದನೆ ಇಲ್ಲದಿರುವುದು ಕುಟುಂಬದವರಿಗೆ ಬೇಸರ ತರಿಸಿತ್ತು. ತಿವಾರಿ ಕತ್ತಿನ ಸುತ್ತಮುತ್ತ ಕಪ್ಪು ಗೆರೆ ಕಂಡು ಬಂದಿದ್ದು ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ
 
ರಾಷ್ಟ್ರ ರಾಜಧಾನಿಯ ದ್ವಾರಕಾದಲ್ಲಿ ವಾಸವಾಗಿದ್ದ ತಿವಾರಿ ಜುಲೈ 7 ರಂದು ತಮ್ಮ ನಿವಾಸದ ಸ್ನಾನದ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಕಳೆದ ಜನೇವರಿ ತಿಂಗಳಲ್ಲಿ ವಿವಾಹವಾಗಿದ್ದ ಅವರು ಪತ್ನಿ, ಅಪ್ಪ ಮತ್ತು ಅಮ್ಮನ ಜತೆಯಲ್ಲಿ ಫ್ಲಾಟ್‌ನಲ್ಲಿ ವಾಸವಾಗಿದ್ದರು.
 
ಜುಲೈ 7 ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬಾತ್ ರೂಮ್‌ನಲ್ಲಿ ಏನೋ ಸದ್ದು ಕೇಳಿ ಓಡಿ ಬಂದ ಪೋಷಕರಿಗೆ ಗೌರವ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಾಣಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಿಲ್ಲ.
 
2009 ರಲ್ಲಿ ತಿವಾರಿ ಇಂಡಿಯನ್ ಪ್ಯಾರಾ ನಾರ್ಮಲ್ ಸೊಸೈಟಿ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಪವಾಡಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಗೌರವ್ ತಿವಾರಿ  ಈ ಸಂಸ್ಥೆಯ ಉದ್ದೇಶ ಉದ್ದೇಶವಾಗಿತ್ತು.
 
ತಮ್ಮ ಮಗನ ಸಾವಿನ ಕುರಿತು ಪ್ರತಿಕ್ರಿಯಿಸಿರುವ ತಂದೆ ಉದಯ್ ತಿವಾರಿ ಕೆಲ ದಿನಗಳಿಂದ ಋಣಾತ್ಮಕ ಶಕ್ತಿಗಳು ನನ್ನನ್ನು 
ಹಿಂಬಾಲಿಸುತ್ತಿವೆ ಎಂದು ನಮ್ಮ ಬಳಿ ಹೇಳಿಕೊಂಡಿದ್ದರು. ಆದರೆ ನಾವದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಹೇಳಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments