Webdunia - Bharat's app for daily news and videos

Install App

ಬಹಿರ್ದೆಸೆಗೆ ಹೋದ ಬಾಲಕಿಯ ತಲೆ ಕಡಿದು ಊರೆಲ್ಲ ಸುತ್ತಿದ!

Webdunia
ಶನಿವಾರ, 26 ಮಾರ್ಚ್ 2022 (12:11 IST)
ಭುವನೇಶ್ವರ : ಮಲವಿಸರ್ಜನೆಗೆ ತೆರಳಿದ್ದ 8 ವರ್ಷದ ಬಾಲಕಿಯ ತಲೆ ಕಡಿದು, ರುಂಡದೊಂದಿಗೆ ಊರಿಡೀ ತಿರುಗಾಡಿದ ಘಟನೆ ಒಡಿಶಾದ ಜಾಜ್ಪುರ ಜಿಲ್ಲೆಯ, ಮಾನಕಿರಾ ಮಂಡಲದ ಗ್ರಾಮದಲ್ಲಿ ನಡೆದಿದೆ.

8 ವರ್ಷದ ಬಾಲಕಿ ಮೃತಳಾಗಿದ್ದಾಳೆ. ಈಕೆಯ ತಲೆಯನ್ನು ಕತ್ತರಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಬೆಳಿಗ್ಗೆ ಮಲವಿಸರ್ಜನೆಗೆಂದು ಹೊಲಕ್ಕೆ ಹೋಗಿದ್ದಳು. ಈ ವೇಳೆ ಅಲ್ಲಿ ವ್ಯಕ್ತಿಯೊಬ್ಬ ಕೊಡಲಿ ಹಿಡಿದು ನಿಂತಿದ್ದನು. ಆಕೆ ನೋಡಿದವನೆ ಆಕೆಯ ಹತ್ತಿರಕ್ಕೆ ಬಂದು ತಲೆ ಕಡಿದು ಕೊಡಲಿಯಿಂದ ಕತ್ತರಿಸಿಬಿಟ್ಟಿದ್ದಾನೆ.

ನಂತರ ತುಂಡರಿಸಿದ ತಲೆಯನ್ನು ಹೊತ್ತು ಊರೆಲ್ಲ ಸುತ್ತಿದ್ದಾನೆ. ಆರೋಪಿ ಪತ್ನಿ ಕೈಯಲ್ಲಿ ತುಂಡರಿಸಿದ ತಲೆಯನ್ನು ಕಂಡಾಗ ಆತನೊಂದಿಗೆ ಜಗಳವಾಡಿದ್ದಾಳೆ. ಆದರೆ ಅವನು ಕೊಡಲಿಯಿಂದ ಹೆಂಡತಿಯನ್ನು ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಆರೋಪಿ ಅಲ್ಲೇ ನೆಲದ ಮೇಲೆ ಮಲಗಿ ನಿದ್ದೆಗೆ ಜಾರಿದ್ದಾನೆ. 

ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಆತ ಮಾದಕ ವ್ಯಸನಿ, ಆದರೆ ಬುದ್ಧಿ ಮಾಂದ್ಯನಲ್ಲ ಎನ್ನುವುದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ