Viral Video, ಪಾಟ್ನಾ: ಹಾಡಹಗಲೇ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಂದ ಐವರ ಗುಂಪು

Sampriya
ಗುರುವಾರ, 17 ಜುಲೈ 2025 (17:04 IST)
Photo Credit X
ವೈದ್ಯಕೀಯ ಚಿಕಿತ್ಸೆಗಾಗಿ ಪೆರೋಲ್‌ನಲ್ಲಿ ಹೊರಬಂದ ಖೈದಿಯೊಬ್ಬನನ್ನು ಗುರುವಾರ ಪಾಟ್ನಾದ ಖಾಸಗಿ ಆಸ್ಪತ್ರೆಯೊಳಗೆ ಐವರು ಅಪರಿಚಿತ ದುಷ್ಕರ್ಮಿಗಳು ಅನೇಕ ಬಾರಿ ಗುಂಡು ಹಾರಿಸಿ ಕೊಂದ ಘಟನೆ ಬಿಹಾರದಲ್ಲಿ ವರದಿಯಾಗಿದೆ. ಆಸ್ಪತ್ರೆಯೊಳಗೆ ನುಗ್ಗಿ ಕೊಲ್ಲುವಷ್ಟರ ಮಟ್ಟಿಗೆ ಬಿಹಾರದಲ್ಲಿ ಗೂಂಡಾಗಿರಿ ಬೆಳೆದಿರುವುದು ಸರ್ಕಾರದ ಆಡಳಿತದ ಕಡೆ ಪ್ರಶ್ನೆ ಎದ್ದಿದೆ. 

ಪೊಲೀಸರ ಪ್ರಕಾರ, ನಗರದ ರಾಜಾ ಬಜಾರ್ ಪ್ರದೇಶದ ಪಾರಸ್ ಆಸ್ಪತ್ರೆಯಲ್ಲಿ ಗುಂಡಿನ ದಾಳಿ ನಡೆದಿದೆ. ಬಲಿಪಶುವನ್ನು ಚಂದನ್ ಮಿಶ್ರಾ ಎಂದು ಗುರುತಿಸಲಾಗಿದೆ. ಬಕ್ಸರ್ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿ ಚಂದನ್ ಮಿಶ್ರಾ ವೈದ್ಯಕೀಯ ಪೆರೋಲ್‌ನಲ್ಲಿ ಬ್ಯೂರ್ ಜೈಲಿನಿಂದ ಬಿಡುಗಡೆಯಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಆಸ್ಪತ್ರೆಯ ಕಾರಿಡಾರ್‌ನಲ್ಲಿ ಐವರು ಬಂದೂಕು ಹಿಡಿದುಕೊಂಡಿದ್ದ ಗೂಂಡಾಗಳು ಚಂದನ್ ಮಿಶ್ರಾ ಇದ್ದ ಕೋಣೆಗೆ ನುಗ್ಗಿದ್ದಾರೆ.  

ಅಲ್ಲಿ ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯ ನಂತರ ಐವರು ದಾಳಿಕೋರರು ಆಸ್ಪತ್ರೆ ಆವರಣದಿಂದ ಪರಾರಿಯಾಗಿದ್ದಾರೆ. 

ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬಕ್ಸರ್ ಪೊಲೀಸರ ನೆರವಿನೊಂದಿಗೆ ಶೂಟರ್‌ಗಳನ್ನು ಗುರುತಿಸಲು ಹುಡುಕಾಟ ಆರಂಭಿಸಿದ್ದಾರೆ.

ಆಸ್ಪತ್ರೆಯ ಭದ್ರತೆಯಲ್ಲಿ ಸಂಭವನೀಯ ಲೋಪದೋಷಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಯ ಕಡೆಯಿಂದ ಏನಾದರೂ ತೊಡಕು ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<> Patna hospital Firing Case, Patna's Paras Hospital Firing Case, Chandan Mishra Case

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments